Advertisement

ಚಿಕ್ಕಮಗಳೂರು : ಸಾಲ ಭಾದೆ ತಾಳಲಾರದೆ ರೈತ ಆತ್ಮಹತ್ಯೆ

09:08 AM Aug 04, 2019 | Team Udayavani |

ಚಿಕ್ಕಮಗಳೂರು : ಸಾಲ ಭಾದೆಯಿಂದ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ತಾಲೂಕಿನ ನಿಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಮೃತ ರೈತ ಮೋಹನ್‌ ಗೌಡ (39) ಎಂದು ಗುರುತಿಸಲಾಗಿದೆ.

ಎರಡು ಎಕರೆ ಜಮೀನಿನಲ್ಲಿ ಬೇಸಾಯ ಮಾಡುತ್ತಿದ್ದ ಅವರು ಬ್ಯಾಂಕ್‌ ಸೇರಿದಂತೆ ವಿವಿಧ ಕಡೆ ಖಾಸಗಿಯವರಿಂದಲೂ ಕೈ ಸಾಲ ಮಾಡಿದ್ದರು.

ಸಾಲವನ್ನು ತೀರಿಸಲಾಗದೆ ಮನನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next