Advertisement

Chikkamagaluru; ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿ; ಕವಿಕಲ್ ಗುಂಡಿ ರಸ್ತೆ ಕುಸಿತ

08:11 AM Jul 28, 2024 | Team Udayavani |

ಚಿಕ್ಕಮಗಳೂರು: ತಾಲೂಕಿನ ಆವುತಿ ಹೋಬಳಿಯ ತುಂಬಳ್ಳಿಪುರ ಗ್ರಾಮದ ಕುಮಾರ್ (35) ಎಂಬಾತ ಹಳ್ಳದಲ್ಲಿ ಕೊಚ್ಚಿಹೋಗಿ ಮೃತಪಟ್ಟಿದ್ದಾನೆ.

Advertisement

ಶುಕ್ರವಾರ ಸಂಜೆ ಜಾನುವಾರುಗಳನ್ನು ಮನೆಗೆ ಹೊಡೆದುಕೊಂಡು ಬರುವುದಾಗಿ ಹೇಳಿ ಹೋಗಿದ್ದ ಕುಮಾರ್ ತಿರುಗಿ‌ ಮನೆಗೆ ಬಂದಿರಲಿಲ್ಲ. ರಾತ್ರಿಯೆಲ್ಲಾ ಕುಟುಂಬಸ್ಥರು ಹುಡುಕಾಟ ನಡೆಸಿದರು ಪತ್ತೆಯಾಗಿರಲಿಲ್ಲ.

ಶನಿವಾರ ಬೆಳಿಗ್ಗೆ ಹುಡುಕಾಟ ನಡೆಸಿದಾಗ ಗ್ರಾಮದ ದೊಡ್ಡಹಳ್ಳದಲ್ಲಿ ಮೃತಹೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೋಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಕುಸಿದ ರಸ್ತೆ

ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಗಿರಿಗೆ ತೆರಳುವ ಮಾರ್ಗದ ಕವಿಕಲ್ ಗಂಡಿ ಸಮೀಪ ರಸ್ತೆ ಪಕ್ಕದಲ್ಲಿ ಧರೆ ಕುಸಿದಿದೆ. ಅಲ್ಲಲ್ಲಿ ರಸ್ತೆ ಮೇಲೆ‌ ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

Advertisement

ವಾರಾಂತ್ಯದಲ್ಲಿ ಇಲ್ಲಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದ್ದರಿಂದ ಭಾರೀ‌ ಅನಾಹುತ ತಪ್ಪಿದೆ.

Advertisement

Udayavani is now on Telegram. Click here to join our channel and stay updated with the latest news.

Next