Advertisement

Chikkamagaluru; ವ್ಯಕ್ತಿಯ ಮೇಲೆ ಲಾಂಗ್ ಬೀಸಿದ ಯುವಕ

03:26 PM Sep 22, 2023 | Team Udayavani |

ಚಿಕ್ಕಮಗಳೂರು: ಹಳೇ ದ್ವೇಷದ ಹಿನ್ನೆಲೆ ಯುವಕನೋರ್ವ ಲಾಂಗ್ ಬೀಸಿದ ಪರಿಣಾಮ ವ್ಯಕ್ತಿಯ ಹೆಬ್ಬೆರಳು ತುಂಡಾಗಿರು ಘಟನೆ ಚಿಕ್ಕಮಗ ಳೂರು ನಗರದಲ್ಲಿ ನಡೆದಿದೆ.

Advertisement

ಚಿಕ್ಕಮಗಳೂರು ತಾಲೂಕಿನ ಸಗನಿಪುರದಲ್ಲಿ ಘಟನೆ ನಡೆದಿದ್ದು, ಕುಮಾರಸ್ವಾಮಿ ಎಂಬ ವ್ಯಕ್ತಿಯ ಮೇಲೆ ಯುವಕ ಕೌಶಿಕ್ ಹಳೆ ದ್ವೇಷದ ಹಿನ್ನೆಲೆ ಲಾಂಗ್ ಬೀಸಿದ್ದು ಈ ವೇಳೆ ಲಾಂಗ್ ತಗುಲಿ ಕುಮಾರಸ್ವಾಮಿಯ ಹೆಬ್ಬೆರಳು ತುಂಡಾಗಿದೆ. ತತ್ ಕ್ಷಣ ಕುಮಾರಸ್ವಾಮಿ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯದ ಅಮಲಿನಲ್ಲಿ ಯುವಕ ದಾಳಿ ನಡೆಸಿದ್ದಾನೆ ಎನ್ನಲಾಗುತ್ತಿದ್ದು ಭಯಭೀತರಾದ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಪ್ರಕರಣದ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next