Advertisement

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

03:16 PM Oct 06, 2024 | Team Udayavani |

ಚಿಕ್ಕಮಗಳೂರು: ಬೆಂಗಳೂರಿನ ಟಿಟಿ ಚಾಲಕರೊಬ್ಬರು ಹೃದಯಾಘಾತದಿಂದ ಚಿಕ್ಕಮಗಳೂರಲ್ಲಿ ಮೃತಪಟ್ಟ ಘಟನೆ ಅ.6ರ ಭಾನುವಾರ ನಡೆದಿದೆ.

Advertisement

ಅವಿನಾಶ್ (25) ಮೃತ ದುರ್ದೈವಿ.

ಬೆಂಗಳೂರಿನ ಸೋಮನಹಳ್ಳಿ ಮೂಲದ ಅವಿನಾಶ್ ಪ್ರವಾಸಿಗರನ್ನು ಚಿಕ್ಕಮಗಳೂರಿಗೆ ಕರೆತಂದಿದ್ದ ವೇಳೆ ಈ ಘಟನೆ ನಡೆದಿದೆ.

ಅವಿನಾಶ್ 3 ವರ್ಷದ ಹಿಂದೆ ಮದುವೆಯಾಗಿದ್ದು,  2 ವರ್ಷದ ಮಗು ಇದೆ.

Advertisement

ಪ್ರವಾಸಿಗರನ್ನು ಹೋಂ ಸ್ಟೇ ಬಳಿ ಬಿಟ್ಟ ಬಳಿಕ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next