Advertisement

ಚಿಕ್ಕಮಗಳೂರು: ಜೇನು ನೊಣಗಳ ದಾಳಿಗೆ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಭೋಜೇಗೌಡ ಬಲಿ

04:04 PM Apr 23, 2022 | Team Udayavani |

ಚಿಕ್ಕಮಗಳೂರು : ತಾಲೂಕಿನ ಕೃಷ್ಣಗಿರಿ ಕಾಫಿ ತೋಟದಲ್ಲಿ ಜೇನುನೊಣಗಳು ದಾಳಿ ನಡೆಸಿದ ಪರಿಣಾಮ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್.ಭೋಜೇಗೌಡ ಅವರು ಮೃತಪಟ್ಟಿದ್ದಾರೆ.

Advertisement

ನೂರಾರು ಜೇನುಗಳು ಕಡಿದ ಪರಿಣಾಮ  ಗಂಭೀರ ಸ್ಥಿತಿಯಲ್ಲಿದ್ದಭೋಜೇಗೌಡ ಅವರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

2 ಬಾರಿ ಕಾಫಿ ಮಂಡಳಿ ಅಧ್ಯಕ್ಷರಾಗಿದ್ದ ಎಂ.ಎಸ್. ಭೋಜೇಗೌಡವರು, ಎರಡು ಬಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿದ್ದರು. ಒಂದು ಬಾರಿ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು. ಒಂದು ಬಾರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿದ್ದರು.

ಚಿಕ್ಕಮಗಳೂರು ತಾಲೂಕಿನ ಅರಶಿನಗುಪ್ಪೆ ಸಮೀಪವಿರುವ ಕೃಷ್ಣಗಿರಿಯಲ್ಲಿ ಅವಘಡ ನಡೆದಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next