Advertisement

ಚಿಕ್ಕಮಗಳೂರು : ಕೋವಿಡ್ ಸೋಂಕಿಗೆ ಓರ್ವ ಬಲಿ! 159 ಹೊಸ ಪ್ರಕರಣ ದೃಢ

06:38 PM Sep 12, 2020 | sudhir |

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದು ಕೋವಿಡ್ ಸೋಂಕಿಗೆ ಓರ್ವ ಬಲಿಯಾಗಿದ್ದು , 159 ಹೊಸ ಪ್ರಕರಣಗಳು ದೃಢಪಟ್ಟಿವೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ.

Advertisement

ಕೋವಿಡ್ ಸೋಂಕಿನಿಂದ ಶನಿವಾರ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದವರ ಸಂಖ್ಯೆ 98ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 159 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಅದರಂತೆ ಚಿಕ್ಕಮಗಳೂರು 108, ಕಡೂರು 15, ತರೀಕೆರೆ 11, ಮೂಡಿಗೆರೆ 10, ಕೊಪ್ಪ 2, ಎನ್.ಆರ್.ಪುರ 7, ಶೃಂಗೇರಿಯಲ್ಲಿ 6 ಮಂದಿ ಸೇರಿದ್ದಾರೆ.

ಇಂದಿನ 159 ಪ್ರಕರಣಗಳು ಸೇರಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 5893 ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು ಹಾಗೆಯೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 4358 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಸದ್ಯ ಜಿಲ್ಲೆಯಲ್ಲಿ 1337 ಸಕ್ರೀಯ ಪ್ರಕರಣಗಳು ಇವೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next