Advertisement

ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ : ಹಳ್ಳದಲ್ಲಿ ಕೊಚ್ಚಿ ಹೋದ 7 ವರ್ಷದ ಬಾಲಕಿ

08:09 PM Jul 04, 2022 | Team Udayavani |

ಚಿಕ್ಕಮಗಳೂರು : ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಶಾಲಾ ವಿದ್ಯಾರ್ಥಿನಿಯೊಬ್ಬಳು ಕಿರು ಸೇತುವೆ ದಾಟುವ ವೇಳೆ ಕಾಲುಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ.

Advertisement

ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು ಸುಪ್ರೀತ ( 7 ವರ್ಷ) ನೀರಿನಲ್ಲಿ ಕೊಚ್ಚಿಹೋದ ಬಾಲಕಿ.

ಹೊಸಪೇಟೆ ಕಿರಿಯ ಪ್ರಾರ್ಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಸುಪ್ರೀತ ಶಾಲೆ ಬಿಟ್ಟು ಸಂಜೆ ಮನೆಗೆ ಬರುತ್ತಿದ್ದಾಗ ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿರುವ ಹಳ್ಳವನ್ನು ದಾಟುವ ವೇಳೆ ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಮಗುಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ಮಹಾರಾಷ್ಟ್ರ: ವಿರೋಧ ಪಕ್ಷದ ನಾಯಕನಾಗಿ ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಆಯ್ಕೆ

Advertisement
Advertisement

Udayavani is now on Telegram. Click here to join our channel and stay updated with the latest news.

Next