Advertisement

ಮಳೆಗೆ ಕೊಚ್ಚಿಹೋದ ಬೆಳೆ : ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

12:45 PM Aug 13, 2022 | Team Udayavani |

ಚಿಕ್ಕಮಗಳೂರು : ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ರೈತರ ಜೀವನಾಡಿಯಾದ ಬೆಳೆಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Advertisement

ಕೊಪ್ಪ ತಾಲೂಕಿನ ಜಯಪುರ ಗ್ರಾಮದ ಗಣೇಶ್ (38) ಮೈಲುತುತ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ.

ತನ್ನ ಜಮೀನಿಗಾಗಿ ಬ್ಯಾಂಕಿನಿಂದ 2 ಲಕ್ಷ  45 ಸಾವಿರ ಕೈ ಸಾಲ ಮಾಡಿಕೊಂಡಿದ್ದ ರೈತ, ಭಾರೀ ಮಳೆಯಿಂದ ಅಡಿಕೆ, ಕಾಫಿ, ಮೆಣಸು ಬೆಳೆಗಳು ಹಾಳಾಗಿದ್ದು, ಕೃಷಿಗಾಗಿ ಮಾಡಿದ್ದ ಸಾಲವನ್ನು ತೀರಿಸುವುದು ಹೇಗೆಂದು ಮನನೊಂದ ಗಣೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನೆ ಕುರಿತು ಮೃತನ ತಂದೆ ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ : ಕಾಲೇಜಿನಲ್ಲಿ ನೃತ್ಯ ಮಾಡುವ ವಿಷಯಕ್ಕೆ ಜಗಳ : ಚಾಕು ಇರಿದು ವಿದ್ಯಾರ್ಥಿ ಕೊಲೆ

Advertisement
Advertisement

Udayavani is now on Telegram. Click here to join our channel and stay updated with the latest news.

Next