Advertisement

ಚಿಕ್ಕಮಗಳೂರು: ಅನ್ಯಧರ್ಮದ ಯುವಕ-ಯುವತಿ ಮೇಲೆ ಹಲ್ಲೆ

12:45 AM Sep 15, 2022 | Team Udayavani |

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದ ಭಿನ್ನ ಧರ್ಮದ ಯುವಕ-ಯುವತಿ ಮೇಲೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಹಲ್ಲೆ ಮಾಡಿರುವ ಆರೋಪದಡಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಎಸ್ಪಿ ಉಮಾ ಪ್ರಶಾಂತ್‌ ಅವರು, ತಾಲೂಕಿನ ಲಕ್ಷ್ಮೀಪುರ ಗ್ರಾಮದ ಹಿಂದೂ ಯುವತಿ- ಮುಸ್ಲಿಂ ಯುವಕ ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದರು. ಈ ವೇಳೆ ಹಿಂದೂ ಪರ ಸಂಘಟನೆಯ ಕೆಲವು ಕಾರ್ಯಕರ್ತರು ನೈತಿಕ ಪೊಲೀಸ್‌ಗಿರಿ ಪ್ರದರ್ಶಿಸಿದ್ದಾರೆ ಎಂದು ಯುವಕ ದೂರು ನೀಡಿದ್ದು ಪರಿಶೀಲಿಸಲಾಗುತ್ತಿದೆ ಎಂದರು.

ಲವ್‌ ಜಿಹಾದ್‌ ಆರೋಪ
ಈ ಜೋಡಿ ಮದುವೆಯಾಗಲು ಮುಂದಾಗಿರುವ ವಿಷಯ ತಿಳಿದ ಹಿಂದೂಪರ ಸಂಘಟನೆಯವರು ಲವ್‌ ಜಿಹಾದ್‌ ನಡೆಸಲಾಗುತ್ತಿದೆ ಎಂದು ಆರೋಪಿಸಿ ಹಲ್ಲೆ ನಡೆಸಿ ಮಹಿಳಾ ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next