Advertisement

ಚಿಕ್ಕಮಗಳೂರು: ಅನ್ಯಧರ್ಮದ ಯುವಕ-ಯುವತಿ ಮೇಲೆ ಹಲ್ಲೆ

12:45 AM Sep 15, 2022 | Team Udayavani |

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದ ಭಿನ್ನ ಧರ್ಮದ ಯುವಕ-ಯುವತಿ ಮೇಲೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಹಲ್ಲೆ ಮಾಡಿರುವ ಆರೋಪದಡಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಎಸ್ಪಿ ಉಮಾ ಪ್ರಶಾಂತ್‌ ಅವರು, ತಾಲೂಕಿನ ಲಕ್ಷ್ಮೀಪುರ ಗ್ರಾಮದ ಹಿಂದೂ ಯುವತಿ- ಮುಸ್ಲಿಂ ಯುವಕ ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದರು. ಈ ವೇಳೆ ಹಿಂದೂ ಪರ ಸಂಘಟನೆಯ ಕೆಲವು ಕಾರ್ಯಕರ್ತರು ನೈತಿಕ ಪೊಲೀಸ್‌ಗಿರಿ ಪ್ರದರ್ಶಿಸಿದ್ದಾರೆ ಎಂದು ಯುವಕ ದೂರು ನೀಡಿದ್ದು ಪರಿಶೀಲಿಸಲಾಗುತ್ತಿದೆ ಎಂದರು.

ಲವ್‌ ಜಿಹಾದ್‌ ಆರೋಪ
ಈ ಜೋಡಿ ಮದುವೆಯಾಗಲು ಮುಂದಾಗಿರುವ ವಿಷಯ ತಿಳಿದ ಹಿಂದೂಪರ ಸಂಘಟನೆಯವರು ಲವ್‌ ಜಿಹಾದ್‌ ನಡೆಸಲಾಗುತ್ತಿದೆ ಎಂದು ಆರೋಪಿಸಿ ಹಲ್ಲೆ ನಡೆಸಿ ಮಹಿಳಾ ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next