Advertisement

ಉಸಿರುಗಟ್ಟಿ ಇಬ್ಬರು ಸಾವು, ಓರ್ವ ಗಂಭೀರ : ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ನಡೆದ ಘಟನೆ

07:25 PM Nov 28, 2021 | Team Udayavani |

ಚಿಕ್ಕಮಗಳೂರು : ನೀರಿನ ಟ್ಯಾಂಕ್ ಕ್ಲೀನ್ ಮಾಡಲು ಇಳಿದ ವೇಳೆ ಉಸಿರುಗಟ್ಟಿ ಇಬ್ಬರು ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರಗೊಂಡ ಘಟನೆ ಜಿಲ್ಲೆಯ ಕಡೂರು ನಗರದ ದೊಡ್ಡಪೇಟೆಯಲ್ಲಿ ಸಂಭವಿಸಿದೆ.

Advertisement

ಘಟನೆಯಲ್ಲಿ ಮೃತಪಟ್ಟವರನ್ನು ಕುಮಾರ್ (50), ವಸಂತ್ (35) ಎನ್ನಲಾಗಿದ್ದು ಖಲೀಂ ಸ್ಥಿತಿ ಗಂಭೀರವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿರ್ಮಾಣ ಹಂತದ ಮನೆ ಟ್ಯಾಂಕ್ ಕ್ಲೀನ್ ಮಾಡಲು ಕುಮಾರ್, ವಸಂತ್ ಹಾಗೂ ಖಲೀಂ ಇಳಿದಿದ್ದಾರೆ ಈ ವೇಳೆ ಗಾಳಿಯ ಪ್ರಮಾಣ ಕಡಿಮೆಯಿದ್ದ ಪರಿಣಾಮ ಉಸಿರುಗಟ್ಟಿ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಖಲೀಂ ಸ್ಥಿತಿ ಗಂಭೀರವಾಗಿದೆ.

ಘಟನೆ ಕುರಿತು ಕಡೂರು ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

Advertisement

Udayavani is now on Telegram. Click here to join our channel and stay updated with the latest news.

Next