Advertisement

ಚಿಕ್ಕಮಗಳೂರು ಜಿಲ್ಲೆ ಮತ್ತೆ ಕೋವಿಡ್-19 ಸೋಂಕು ಮುಕ್ತ

05:48 PM Jun 06, 2020 | keerthan |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇತ್ತೀಚೆಗೆ ದೃಢವಾಗಿದ್ದ 18 ಕೋವಿಡ್-19 ಪ್ರಕರಣಗಳ ಪೈಕಿ ಎರಡು ಪ್ರಕರಣಗಳು ನೆಗೆಟಿವ್ ಆಗಿದ್ದು, ಹೀಗಾಗಿ ಜಿಲ್ಲೆ ಈಗ ಸೋಂಕು ಮುಕ್ತವಾಗಿದೆ.

Advertisement

ಉಳಿದ 16 ಮಂದಿ ಕೋವಿಡ್-19 ಸೋಂಕಿತರಲ್ಲಿ‌ ಕಳೆದ ವಾರ ಎಂಟು ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಶನಿವಾರ ಉಳಿದ ಸೋಂಕಿತರೂ ಗುಣಮುಖರಾಗಿದ್ದು ಎಲ್ಲರನ್ನೂ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿದ್ದ ಎಲ್ಲಾ 16 ಮಂದಿ ಸೋಂಕಿತರು ಹೊರರಾಜ್ಯಗಳಿಂದ ಬಂದವರಾಗಿದ್ದು, ಈ ಪೈಕಿ ನಾಲ್ವರು 17 ವರ್ಷಕ್ಕಿಂತ ಕೆಳಗಿನವರಾಗಿದ್ದರು.

ಇದೀಗ ಎಲ್ಲ‌ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಕೋವಿಡ್-19 ಸೋಂಕಿತರ ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮತ್ತೆ ಕೋವಿಡ್ ಸೋಂಕು ಮುಕ್ತವಾದಂತಾಗಿದೆ. ಇದರಿಂದಾಗಿ ಜಿಲ್ಲೆಯ ಜನರು ಸಂತಸಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next