Advertisement

Chikkamagaluru:ಬ್ಯಾಂಕ್ ಸಿಬಂದಿಗಳಿಂದಲೇ ಬ್ಯಾಂಕ್‌ಗೆ ದೋಖಾ!

11:45 PM Nov 30, 2023 | Team Udayavani |

ಚಿಕ್ಕಮಗಳೂರು: ಬ್ಯಾಂಕ್ ಸಿಬಂದಿಗಳೇ ಬ್ಯಾಂಕ್‌ಗೆ ದೋಖಾ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಬ್ಯಾಂಕ್ ಸಿಬಂದಿಗಳು ಬ್ಯಾಂಕ್‌ನಲ್ಲಿ ಗ್ರಾಹಕರು ಇರಿಸಿದ್ದ ಚಿನ್ನ ಮತ್ತು ಎಫ್‌ಡಿ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದ್ದು ನಕಲಿ ಚಿನ್ನದ ಮೇಲೆ ಲೋನ್ ಮಾಡಿ ಹಣ ದುರುಪಯೋಗಪಡಿಸಿಕೊಂಡಿದ್ದು ಇದರಿಂದ ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಗ್ರಾಹಕರು ಇರಿಸಿದ್ದ ಚಿನ್ನವನ್ನು ಮಾರಾಟ ಮಾಡಿ ಆ ಜಾಗದಲ್ಲಿ ನಕಲಿ ಚಿನ್ನವನ್ನು ಇರಿಸಲಾಗಿದೆ. ಹಾಗೂ ಎಫ್‌ಡಿ ಹಣವನ್ನು ಡ್ರಾ ಮಾಡಿಕೊಂಡು ಗ್ರಾಹಕರಿಗೆ ಬ್ಯಾಂಕ್ ಸಿಬಂದಿಗಳು ವಂಚಿಸಿದ್ದಾರೆ.

ಬೆಂಗಳೂರಿನ ಬ್ಯಾಂಕ್ ಅಧಿಕಾರಿಗಳು ಈ ಸಂಬಂಧ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಗ್ರಾಹಕರು ಬ್ಯಾಂಕ್‌ನಲ್ಲಿ ಇರಿಸಿದ್ದ ಚಿನ್ನವನ್ನು ಮಾರಾಟ ಮಾಡಿ ನಕಲಿ ಚಿನ್ನವನ್ನು ಆ ಜಾಗದಲ್ಲಿ ಇರಿಸಲಾಗಿದ್ದು, 141 ಚಿನ್ನದ ಪ್ಯಾಕೇಟ್‌ಗಳಲ್ಲಿ 140 ಪ್ಯಾಕೇಟ್‌ಗಳಲ್ಲಿ ನಕಲಿ ಚಿನ್ನವನ್ನು ಇರಿಸಿರು ವುದು ಪರಿಶೀಲನೆ ವೇಳೆ ಬ್ಯಾಂಕ್ ಅಧಿಕಾರಿಗಳಿಗೆ ತಿಳಿದು ಬಂದಿದೆ.

ಬ್ಯಾಂಕ್ ಸಿಬಂದಿಗಳು ಕೋಟ್ಯಂತರ ರೂ. ಬ್ಯಾಂಕ್‌ಗೆ ಮೋಸ ಮಾಡಿದ್ದು, ಈ ಪ್ರಕರಣ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಸಿಬಂದಿಗಳಾದ ಶಾಖೆಯ ಮ್ಯಾನೇಜರ್ ಸಂದೀಪ್ ಕೊಲ್ಲೂರಿ, ಪ್ರಶಾಂತ್, ನಾರಾಯಣಸ್ವಾಮಿ, ಲಾವಣ್ಯ, ಶ್ವೇತಾ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬೆಂಗಳೂರು ಮ್ಯಾನೇಜರ್ ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದು, ತನಿಖೆಯಿಂದ ಇನಷ್ಟು ಮಾಹಿತಿ ಬಹಿರಂಗಗೊಳ್ಳಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next