Advertisement

Chikkamagaluru; ಇದೇ ಮೊದಲ ಬಾರಿಗೆ ದತ್ತಮಾಲೆ ಧರಿಸಿದ ಆರ್. ಅಶೋಕ್

09:08 PM Dec 24, 2023 | Team Udayavani |

ಚಿಕ್ಕಮಗಳೂರು: ದತ್ತಜಯಂತಿ ಹಿನ್ನಲೆ ವಿಪಕ್ಷ ನಾಯಕ‌ ಆರ್. ಅಶೋಕ್ ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ದತ್ತಮಾಲೆ ಧರಿಸಿದರು. ಭಾನುವಾರ ಸಂಜೆ ನಗರಕ್ಕೆ ಆಗಮಿಸಿದ ಅವರು, ನಗರದ ಕಾಮಧೇನು ಗಣಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿಜೆಪಿ ಮುಖಂಡರು ಹಾಗೂ ಆರ್ಚಕರ ಸಮ್ಮುಖದಲ್ಲಿ ದತ್ತಮಾಲೆ ಧರಿಸಿದರು.ಈ ವೇಳೆ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಸಾಥ್ ನೀಡಿದರು.

Advertisement

ಆರ್.ಅಶೋಕ್‌ ಅವರು ಹಿಂದೆ ಅನೇಕ ಬಾರೀ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆದಿದ್ದರು. ಸಚಿವರಾದ ಅವಧಿಯಲ್ಲಿಯೂ ಹಲವು ಬಾರೀ ದತ್ತಪೀಠಕ್ಕೆ ಭೇಟಿ ನೀಡಿದ್ದರು.

ಇದೇ ಮೊದಲ ಬಾರೀ ದತ್ತ ಮಾಲೆ ಧರಿಸಿದರು. ಸೋಮ ವಾರ ದತ್ತಜಯಂತಿ ಅಂಗವಾಗಿ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ನಡೆಯಲಿದೆ. ಮಂಗಳ ವಾರ ದತ್ತಭಕ್ತರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next