Advertisement

ಮೂರು ದಿನವಾದರೂ ಪತ್ತೆಯಾಗಿಲ್ಲ ಕೊಚ್ಚಿಹೋದ ಚಿಕ್ಕಮಗಳೂರಿನ ಬಾಲಕಿ ಸುಪ್ರೀತ

12:04 PM Jul 07, 2022 | Team Udayavani |

ಚಿಕ್ಕಮಗಳೂರು: ಮಳೆಯ ಆರ್ಭಟಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಸುಪ್ರೀತ ಇನ್ನೂ ಪತ್ತೆಯಾಗಿಲ್ಲ. ಮೂರು ದಿನಗಳಿಂದ ಸತತವಾಗಿ ಹುಡುಕಿತ್ತದ್ದರೂ ಬಾಲಕಿಯನ್ನು ಪತ್ತೆ ಹಚ್ಚಲಾಗಿಲ್ಲ.

Advertisement

ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಸುಪ್ರೀತ ಸೋಮವಾರ ಸಂಜೆ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಬರುತ್ತಿರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು. ಆದರೆ ಸತತ ಕಾರ್ಯಾಚರಣೆ ಮಾಡಿದರೂ ಬಾಲಕಿಯ ಪತ್ತೆಯಾಗಿಲ್ಲ.

ಇದನ್ನೂ ಓದಿ:ಕಡಲ್ಕೊರೆತದ ಕುರಿತು ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಿಎಂ ಬೊಮ್ಮಾಯಿ

ಬುಧವಾರ ಎಸ್ ಡಿಆರ್ ಎಫ್ ತಂಡವು ಆಗಮಿಸಿ ಶೋಧಕಾರ್ಯ ಮಾಡಿತ್ತು. ಮುಳುಗು ತಜ್ಞರಿಂದ ಶೋಧ ಕಾರ್ಯ ಮಾಡಲಾಗಿತ್ತು. 70 ಕ್ಕೂ ಹೆಚ್ಚು ಸಿಬ್ಬಂದಿಗಳಿಂದ ಶೋಧ ಕಾರ್ಯ ಮಾಡಲಾಗಿದೆ. ಕಾರ್ಯಾಚರಣೆಗೆ ಸ್ಥಳೀಯರು ಸಾಥ್ ನೀಡಿದ್ದರು. ಹೊಸಪೇಟೆಯಿಂದ ಮದಗದಕೆರೆವರೆಗೂ ಶೋಧಕಾರ್ಯ ಮಾಡಿದರೂ ಸುಪ್ರೀತ ಪತ್ತೆಯಾಗಿಲ್ಲ.

ಉರುಳಿ ಬಿದ್ದ ಮರ: ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಬಾಳೆಹೊಳೆ ಗ್ರಾಮದಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಮಣ್ಣಿನ ರಾಶಿ ಸಮೇತ ರಸ್ತೆಗೆ ಮರ ಉರುಳಿ ಬಿದ್ದ ಕಾರಣ, ಮಾಗುಂಡಿಯಿಂದ ಕಳಸಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next