Advertisement

ಹೇಮಾವತಿ ನದಿಗೆ ಬಿದ್ದು ಮಹಿಳೆ ಸಾವು: ಮಹಾಮಳೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರನೇ ಬಲಿ!

05:24 PM Aug 13, 2020 | sudhir |

ಚಿಕ್ಕಮಗಳೂರು : ಮಹಾಮಳೆಗೆ ಮೈದುಂಬಿ ಹರಿಯುತ್ತಿರುವ ಹೇಮಾವತಿ ನದಿಯ ಪ್ರವಾಹಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ಗುರುವಾರ ಸಂಭವಿಸಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಮಹಾಮಳೆಗೆ ಆರು ಮಂದಿ ಸಾವನ್ನಪ್ಪಿದ್ದಾರೆ.

Advertisement

ಮೃತರನ್ನು ದೇವಮ್ಮ (55) ಎಂದು ತಿಳಿದುಬಂದಿದ್ದು, ಅವರು ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ಗದ್ದೆ ಕೆಲಸಕ್ಕೆ ಹೋಗುತಿದ್ದ ಸಂದರ್ಭ ಕಾಲು ಜಾರಿ ಹೇಮಾವತಿ ನದಿಗೆ ಬಿದ್ದಿದ್ದಾರೆ ಪರಿಣಾಮ ಹೇಮಾವತಿ ನದಿ ಉಕ್ಕಿ ಹರಿಯುತ್ತಿರುವುದರಿಂದ ದೇವಮ್ಮ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ನಂತರ ಹುಡುಕಾಟ ನಡೆಸಿದ ಸಂದರ್ಭ ಸುಮಾರು ಎರಡು ಕಿ.ಮೀ ದೂರದಲ್ಲಿ ದೇವಮ್ಮ ಅವರ ಮೃತ ದೇಹ ಪತ್ತೆಯಾಗಿದೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಈಗ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಹೇಮಾವತಿ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿದೆ.

ಈ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next