Advertisement

ಅಲ್ಲಲ್ಲಿ ಧಾರಾಕಾರ ಮಳೆ

04:19 PM Jun 29, 2020 | Naveen |

ಚಿಕ್ಕಮಗಳೂರು: ಜಿಲ್ಲೆಯ ಅಲ್ಲಲ್ಲಿ ಭಾನುವಾರ ಧಾರಾಕಾರ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕಳೆದ ಕೆಲವು ದಿನಗಳ ಹಿಂದೆ ಮಲೆನಾಡಿನಲ್ಲಿ ಮುಂಗಾರಿಗೂ ಮುನ್ನಾ ಉತ್ತಮ ಮಳೆಯಾಗಿತ್ತು. ನಂತರ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭಗೊಂಡಿದೆ.

Advertisement

ಶನಿವಾರ ಮತ್ತು ಭಾನುವಾರ ಮೋಡ ಕವಿದ ವಾತವರಣ ನಿರ್ಮಾಣವಾಗಿದ್ದು, ಭಾನುವಾರ ಮಧ್ಯಾಹ್ನದ ವೇಳೆಗೆ ಚಿಕ್ಕಮಗಳೂರು ನಗರ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿ ಅರ್ಥ ಗಂಟೆಗೂ ಹೆಚ್ಚು ಕಾಲ ಮಳೆಯಾಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ತಾಲೂಕು ವ್ಯಾಪ್ತಿಯಲ್ಲಿ ಅಲ್ಲಲ್ಲಿ ಧಾರಾಕಾರ ಮಳೆಯಾಗಿರುವ ಬಗ್ಗೆ ವರದಿಯಾಗಿದ್ದು, ಉಳಿದಂತೆ ಬಯಲು ಸೀಮೆ ಪ್ರದೇಶವಾದ ತರೀಕೆರೆ, ಕಡೂರು ತಾಲೂಕು ವ್ಯಾಪ್ತಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ.

ಕಳೆದ ಅನೇಕ ದಿನಗಳಲ್ಲಿ ಜಿಲ್ಲಾದ್ಯಂತ ಈಗಾಗಲೇ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಹೊಲಗದ್ದೆಗಳಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ರೈತರು ಕೃಷಿ ಚಟುವಟಿಕೆಗಳಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಮುಂಗಾರು ಮಳೆ ಸಿಂಚನ ಪ್ರಾರಂಭಗೊಂಡಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ.

Advertisement

Udayavani is now on Telegram. Click here to join our channel and stay updated with the latest news.

Next