Advertisement

Chikkamagaluru ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ

08:54 PM Jul 22, 2023 | Team Udayavani |

ಚಿಕ್ಕಮಗಳೂರು: ಕಾಫಿನಾಡಿನಾದ್ಯಂತ ಮಳೆ ಮುಂದುವರಿದಿದೆ. ಮಳೆಯ ಜೊತೆಗೆ ಭಾರೀ ಪ್ರಮಾಣದ ಗಾಳಿ ಬೀಸುತ್ತಿದ್ದು ಕೆಲವೆಡೆ ಅನಾಹುತಗಳನ್ನು ಸೃಷ್ಟಿಸಿದೆ.

Advertisement

ರಸ್ತೆಗೆ ಬಿದ್ದ ಮರ; ಟ್ರಾಫಿಕ್ ಜಾಮ್
ಮುಳ್ಯಯ್ಯನಗಿರಿ ಮಾರ್ಗದಲ್ಲಿ ರಸ್ತೆಗೆ ಮರ ಬಿದ್ದ ಪರಿಣಾಮ ಅಲ್ಲಂಪುರದಿಂದ ಕೈಮರ ಚೆಕ್ ಪೋಸ್ಟ್ ವರೆಗೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮರ ತೆರವುಗೊಳಿಸಲು ಸ್ಥಳೀಯರು ಹರಸಾಹಸ ಪಟ್ಟರು. ಚಿಕ್ಕಮಗಳೂರಿನ ಹೊರಹೊಲಯದ ಅಲ್ಲಂಪುರದಲ್ಲಿ ಘಟನೆ ನಡೆದಿದೆ.

ಮೈ ಮೇಲೆ ಬಿದ್ದ ಬೃಹತ್ ಮರ
ಕಳಸ ತಾಲೂಕಿನ ಸಂಪಿಖಾನ್ ಗ್ರಾಮದಲ್ಲಿ ಜಾನುವಾರುಗಳಿಗೆ ಹುಲ್ಲು ಕೊಯ್ಯುವಾಗ ಬೃಹತ್ ಮರ ಮೈಮೇಲೆ ಬಿದ್ದ ಪರಿಣಾಮ ಶಂಕರಗೌಡ ಎಂಬುವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಕಳಸದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮರ ಉರುಳಿ ಕಾರು ಜಖಂ
ಕೊಟ್ಟಿಗೆಹಾರ : ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರು ಫುಲ್ ಜಖಂಗೊಂಡ ಘಟನೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ಕಾಲಬೈರವೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಬೆಂಗಳೂರು ಮೂಲದವರು ಬೆಂಡಾಜೆ ಬೆಟ್ಟಕ್ಕೆ ಟ್ರಕ್ಕಿಂಗ್ ಹೋಗಿದ್ದರು. ಆ ವೇಳೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಕಾರೊಂದು ಸಂಪೂರ್ಣ ಜಖಂ ಆಗಿದ್ದು, ಆದರೆ, ಅದೃಷ್ಟವಶಾತ್ ಕಾರಿನಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಟ್ರಕ್ಕಿಂಗ್ ಹೋದವರಿಗೆ ಕಾರ್ ಮೇಲೆ ಮರ ಬಿದ್ದಿರೋದು ಗೊತ್ತೇ ಇಲ್ಲ.

Advertisement

ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next