Advertisement

ಜನರ ಬದುಕು ಬಲು ಕಷ್ಟ

01:22 PM Aug 11, 2019 | Naveen |

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ, ಹಿರೇಬೈಲು, ಕಳಸ, ಜಯಪುರ, ಬಾಳೆಹೊನ್ನೂರು ಮುಂತಾದೆಡೆ ಮಳೆಯಿಂದ ಆದ ತೊಂದರೆಗಳ ನಿವಾರ ಣೆಗೆ ಜಿಲ್ಲಾಡಳಿತ ಹಲವು ಪರಿಹಾರ ಕ್ರಮಗಳನ್ನು ಕೈಗೊಂಡಿದೆ. ಇನ್ನೂ ಪರಿಣಾಮಕಾರಿ ಯಾಗಿ ಎದುರಿಸಲು ಹಲವು ತಂಡಗಳು ಸನ್ನದ್ಧವಾಗಿವೆ. ಯಾರು ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

Advertisement

ನಗರದ ಕೆಲವು ಬಡಾವಣೆೆಗಳಿಗೆ ಕುಡಿಯುವ ನೀರು ಒದಗಿಸುವ ಹಿರೇಕೊಳಲೆ ಕೆರೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಶನಿವಾರ ಹಿರೇಕೊಳಲೆ ಕೆರೆಗೆ ಪತ್ನಿ ಪಲ್ಲವಿ ಅವರೊಂದಿಗೆ ಬಾಗಿನ ಅರ್ಪಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ವರ್ಷದಂತೆ ಈ ಬಾರಿಯೂ ಕೆರೆ ಕೋಡಿ ಬಿದ್ದಿರುವುದು ಸಂತೋಷ ತಂದಿದೆ. ಕೆಲವು ಕಡೆ ಮಳೆಯಿಂದ ಅನೇಕ ಸಮಸ್ಯೆಗಳು ಆಗಿರುವುದನ್ನು ಇಡೀ ರಾಜ್ಯದಲ್ಲಿ ಕಾಣುತ್ತಿದ್ದೇವೆ. ರಾಜ್ಯದಲ್ಲಿ ಬಹುತೇಕ ಅಣೆಕಟ್ಟೆಗಳು ಭರ್ತಿಯಾಗಿದ್ದು, ಉಳಿದ ಡ್ಯಾಂಗಳು ಶೇ.80ರಷ್ಟು ಭರ್ತಿಯಾಗಿರುವುದು ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಭರ್ತಿಯಾಗುವ ಲಕ್ಷಣಗಳು ಕಾಣುತ್ತಿದೆ. ನಮ್ಮ ಜಿಲ್ಲೆಯಲ್ಲಿರುವ ಎಲ್ಲ ಕೆರೆ, ಕಟ್ಟೆಗಳು ಭರ್ತಿಯಾಗಿ ಬಾಗಿನ ಅರ್ಪಿಸುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಆತಂಕಪಡುವ ಅಗತ್ಯವಿಲ್ಲ: ಶುಕ್ರವಾರ ಕೊಡುಗು ಜಿಲ್ಲೆ ಅತಿವೃಷ್ಟಿ ಪ್ರದೇಶಗಳಿಗೆ ನಮ್ಮ ತಂಡ ಭೇಟಿ ನೀಡಿದ ಸಂದರ್ಭದಲ್ಲಿ 21ಕಡೆ ಪುನರ್ವಸತಿ ಶಿಬಿರಗಳನ್ನು ತೆರೆಯಲಾಗಿರುವುದನ್ನು ಗಮನಿಸಿದ್ದೇವೆ. ನದಿ ಪ್ರದೇಶಗಳ ಸಮೀಪ ವಾಸಿಸುವ ಜನರ ಬದುಕು ಕಷ್ಟಕರವಾಗಿದೆ. ಒಂದೇ ಕುಟುಂಬದ 5 ಜನರು ಮೃತ ಪಟ್ಟಿದ್ದು, ಏಳು ಮಂದಿ ಕಾಣೆಯಾಗಿದ್ದಾರೆ ಎಂದರು.

ಸರ್ಕಾರಕ್ಕೆ ಕ್ಷಣ ಕ್ಷಣದ ಮಾಹಿತಿ: ಹೇಮಾವತಿ ನದಿ ಭಾಗದಲ್ಲಿ ಮತ್ತು ಭದ್ರ ಉಪನದಿ ಪ್ರದೇಶಗಳಲ್ಲಿ ಜಲಾವೃತವಾಗಿರುವ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆತರುವ ಉದ್ದೇಶದಿಂದ ವೈಜ್ಞಾನಿಕ ಬೋಟ್‌ಗಳ ವ್ಯವಸ್ಥೆ ಮಾಡಲಾಗಿದೆ. ಹೆಲಿಕಾಪ್ಟರ್‌ ಅವಶ್ಯಕತೆ ಕಂಡು ಬಂದರೆ ವ್ಯವಸ್ಥೆ ಮಾಡಲು ಈಗಾಗಲೇ ಸಂಬಂಧಪಟ್ಟವರಲ್ಲಿ ಕೋರಲಾಗಿದೆ. ಜಿಲ್ಲೆಯಲ್ಲಿ ಸಂಪರ್ಕ ಕಲ್ಪಿ ಸುವ ವಿವಿಧ ಭಾಗದ ರಸ್ತೆಗಳ ಕಡಿತವಾಗಿರುವ ಬಗ್ಗೆಮಾಹಿತಿ ಪಡೆಯಲಾಗಿದ್ದು, ಜಿಲ್ಲಾಧಿಕಾರಿಗಳು ನಿರಂತರಸಂಪರ್ಕದಲ್ಲಿದ್ದಾರೆ. ಕ್ಷಣ ಕ್ಷಣದ ಮಾಹಿತಿ ಪಡೆದು ಸರ್ಕಾರಕ್ಕೆ ತಿಳಿಸುವ ಕೆಲಸ ಮಾಡಲಾಗಿದೆ. ಅಗತ್ಯವಿದ್ದರೆ ಮುಖ್ಯಮತ್ರಿಗಳು ಜಿಲ್ಲೆಗೆ ಭೇಟಿ ನೀಡುತ್ತಾರೆ ಎಂದರು. ರಾಜ್ಯದಲ್ಲಿ ಅತಿವೃಷ್ಟಿಗೆ ಒಳಗಾಗಿರುವ ವೇಳೆ ಸರ್ಕಾರದ ಜೊತೆ ಸಾರ್ವಜನಿಕರು ಸಹಕಾರ ನೀಡುವಂತೆ ಜನತೆಯಲ್ಲಿ ಮನವಿ ಮಾಡಿದ ಶಾಸಕರು, ಅತಿವೃಷ್ಟಿಗೆ ಒಳಗಾಗಿರುವ ಜನ-ಜಾನುವಾರು ಮತ್ತು ಆಗಿರುವ ಸಮಸ್ಯೆಗಳು ಮತ್ತು ನಷ್ಟದ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮನುಷ್ಯ ಪ್ರಕೃತಿ ಜೊತೆ ಜೊತೆಯಲ್ಲಿ ಬದುಕಬೇಕಾಗಿರುವುದರಿಂದ ಪ್ರಕೃತಿಗೆ ಸವಾಲು ಹಾಕಲು ಸಾಧ್ಯವಿಲ್ಲ ಎಂದು ಹೇಳಿದರು.

Advertisement

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳಿಗೆ ಸಂಬಂಧಪಟ್ಟ ವಿಚಾರ. ಈಗ ರಾಜ್ಯದ ಹಲವು ಜಿಲ್ಲೆಗಳು ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿವೆ. ಮೊದಲು ಅವರ ನೆರವಿಗೆ ದಾವಿಸಬೇಕಿದೆ. ಅತಿವೃಷ್ಟಿ ಪ್ರದೇಶಗಳಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ಸಂಸದರು, ಶಾಸಕರು ಎಲ್ಲರೂ ಸಹ ಪಕ್ಷಭೇದ ಮರೆತು ಜನತೆಯ ನೆರವಿಗೆ ನಿಂತಿದ್ದಾರೆ. ಸರ್ಕಾರಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದರು. ನಗರಸಭೆ ಮಾಜಿ ಅಧ್ಯಕ್ಷರಾದ ಎಚ್.ಡಿ.ತಮ್ಮಯ್ಯ, ಪುಷ್ಪರಾಜ್‌, ಮಾಜಿ ಸದಸ್ಯ ರಾಜಶೇಖರ್‌, ನಗರಸಭೆ ಆಯುಕ್ತ ಪರಮೇಶಿ, ಎಇಇಲೋಕೇಶ್‌, ಜನಪ್ರತಿನಿಧಿಗಳು ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next