Advertisement

Chikkamagaluru ಪತ್ನಿಯನ್ನು ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಬಂದ ಪತಿ

09:56 PM Sep 05, 2023 | Team Udayavani |

ಚಿಕ್ಕಮಗಳೂರು: ಪತಿ ಪತ್ನಿಯನ್ನು ಹತ್ಯೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ನಗರದ ಕ್ರಿಶ್ಚಿಯನ್ ಕಾಲೋನಿಯ ಶಬ್ಬೀರ್ ಅಹ್ಮದ್ ಪತ್ನಿ ಶಮಭಾನು(34) ಅವರನ್ನು ದೊಣ್ಣೆಯಿಂದ ಹೊಡೆದು ಸಾಯಿಸಿದ್ದಾನೆ.

Advertisement

ಕಳೆದ ಒಂದು ವರ್ಷದ ಹಿಂದೆ ಶಮಭಾನು ಅವರನ್ನು ಶಬ್ಬೀರ್ ಮದ್ವೆಯಾಗಿದ್ದರು. ಪತ್ನಿಯನ್ನು ಹತ್ಯೆ ಮಾಡಿ ನೇರವಾಗಿ ನಗರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಅಧ ಪ್ರಕರಣ ದಾಖಲಿಸಿದ್ದಾರೆ. ಪತ್ನಿ ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪೊಲೀಸ್ ತನಿಖೆಯಿಂದ ಯಾವ ಕಾರಣದಿಂದ ಪತ್ನಿಯನ್ನು ಹತ್ಯೆ ಮಾಡಿರುವುದಾಗಿ ತಿಳಿದು ಬರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next