Advertisement

Chikkamagaluru:ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕು ಇ*ರಿತ

11:54 PM Sep 12, 2024 | Team Udayavani |

ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ನೌಕರ ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ವರ್ಗಾವಣೆ ಸಂಬಂಧ ತಮ್ಮ ಕುಟುಂಬಸ್ಥರನ್ನು ಕರೆಸಿ ಬುದ್ದಿ ಹೇಳಿದ್ದಕ್ಕೆ ಕುಪಿತನಾದ ನೌಕರನೊಬ್ಬ ಕೆಎಸ್‌ಆ‌ರ್. ಟಿ.ಸಿ ಡಿ.ಸಿಗೆ ಚಾಕು ಇರಿದಿದ್ದಾನೆ ಎನ್ನಲಾಗುತ್ತಿದೆ.

Advertisement

ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾ ಧಿಕಾರಿ ಜಗದೀಶ್ ಕುಮಾರ್ ಮೇಲೆ ಚಾಕುವಿನಿಂದ ಇರಿಯಲಾಗಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಏಕಾಏಕಿ ಚಾಕುವಿನಿಂದ ಮನಸೋಇಚ್ಚೆ ಚುಚ್ಚಿದ್ದಾನೆ. ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಕೈ ಬೆರಳುಗಳಿಗೆ ಗಾಯಗಳಾಗಿದ್ದು ಸರ್ಕಾರಿ ಮಲ್ಲೆಗೌಡ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.ನೌಕರ ರಿತೇಶ್ ನನ್ನು ಬಂಧಿಸಲಾಗಿದೆ.

ಕೆಎಸ್ ಆರ್ ಟಿಸಿ ವಿಭಾಗೀಯ ಅಧಿಕಾರಿ ಜಗದೀಶ್ ಕುಮಾರ್ ಅವರು ರಿತೇಶ್‌ ಅವರ ಹಾಜರಾತಿ ಸರಿಯಿಲ್ಲ ಎಂದು ಕುಟುಂಬದ ಸದಸ್ಯರನ್ನ ಕರೆಸಿ ಕೌನ್ಸಿಲಿಂಗ್‌ ಮಾಡಿದ್ದಾರೆ‌ ಇದರಿಂದ ಕುಪಿತನಾಗಿ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದೆ.

ಕುಟುಂಬದವರ ಮನವಿ ಮೇರೆಗೆ ಚಿಕ್ಕಮಗಳೂರಿನಿಂದ ಬೇಲೂರಿಗೆ ವರ್ಗಾವಣೆ ಯಾಗಿದ್ದ ರಿತೇಶ್ ತನಗೆ ಮನೆಯವರ ಎದುರು ಅವಮಾನ ಮಾಡಿದ್ದಾರೆ ಎಂದು ಇಂದು ಏಕಾಏಕಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ್ದಾನೆ ಎನ್ನಲಾಗುತ್ತದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ರಿತೇಶ್ ನನ್ನು ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next