Advertisement

ಚಿರತೆ ಹೆಜ್ಜೆ ಗುರುತು ಪತ್ತೆ-ಆತಂಕ

05:17 PM Apr 16, 2020 | Naveen |

ಚಿಕ್ಕಮಗಳೂರು: ನಗರದ ಕೋಟೆ ಬಡಾವಣೆಯಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಮಂಗಳವಾರ ರಾತ್ರಿ ಕೋಟೆ ಬಡಾವಣೆ ಹಳೇ ಆರ್‌ಟಿಒ ಕಚೇರಿ ಬಳಿ ಚಿತರೆ ಓಡಾಡಿರುವ ಹೆಜ್ಜೆ ಗುರುತುಗಳಿವೆ. ಬುಧವಾರ ಬೆಳಿಗ್ಗೆ ಆರ್‌ಟಿಒ ಕಚೇರಿ ಸುತ್ತಮುತ್ತ ಪರಿಶೀಲನೆ ನಡೆಸಿದಾಗ ಚಿರತೆ ಬಂದಿರುವುದು ದೃಢಪಟ್ಟಿದೆ.

Advertisement

ಬುಧವಾರ ರಾತ್ರಿ 7.30ರ ಸಮಯದಲ್ಲಿ ಬಡಾವಣೆಯ ಸೆಂಟ್‌ ಮೇರಿಸ್‌ ಶಾಲೆ ಸಮೀಪ ಚಿತರೆ ಓಡಾಡಿರುವುದನ್ನು ನೋಡಿರುವುದಾಗಿ ಸ್ಥಳೀಯರು ತಿಳಿಸಿದ್ದು, ಈ ಬಗ್ಗೆ ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಡಿಎಫ್‌ಒ ಜಗನ್ನಾಥ್‌ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಹೆಜ್ಜೆ ಗುರುತು ಆಧರಿಸಿ ಅದರ ಚಲನ ವಲನಗಳ ಬಗ್ಗೆ ಪರೀಶೀಲನೆ ನಡೆಸಿದೆ. ಅರಣ್ಯ ಸಿಬ್ಬಂದಿ ಬೆಂಕಿ ಹಾಕಿ, ಪಟಾಕಿ ಸಿಡಿಸಿ ಚಿತರೆ ಓಡಿಸಲು ಪ್ರಯತ್ನಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next