Advertisement

ದಾಖಲೆಯ ಅಂತರದಲ್ಲಿ ಶೋಭಾ ಜಯ

12:41 PM May 24, 2019 | Naveen |

ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅತ್ಯಧಿಕ ಮತಗಳ ಅಂತರದಲ್ಲಿ ಜಯ ಗಳಿಸಿದ್ದು, ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದೆ. ಉಡುಪಿ ಲೋಕಸಭಾ ಕ್ಷೇತ್ರಕ್ಕೆ 1951ರಿಂದ ಇದುವರೆಗೆ ನಡೆದ 17 ಲೋಕಸಭಾ ಚುನಾವಣೆಗಳಲ್ಲಿ ಮತ್ತು ಚಿಕ್ಕಮಗಳೂರು ಕ್ಷೇತ್ರ ಹಾಸನದಿಂದ ಬೇರ್ಪಟ್ಟು 1967ರಿಂದ ಸ್ವತಂತ್ರ ಕ್ಷೇತ್ರವಾಗಿ 2009ರ ವರೆಗೆ ನಡೆದ 13 ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ದಾಖಲೆಯ ಅಂತರದಲ್ಲಿ ವಿಜಯ ಸಾಧಿಸಿದ್ದಾರೆ.

Advertisement

ಈ ಮೂಲಕ ಮೋದಿ ಅಲೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲೂ ಬಿಜೆಪಿಯ ಕೈ ಹಿಡಿದಿದೆ. ಬಿಜೆಪಿ ನಾಯಕರ ಒಗ್ಗಟ್ಟು, ಕಾರ್ಯಕರ್ತರ ಹುಮ್ಮಸ್ಸು, ಯುವ ಮತದಾರರು ಮೋದಿ ಪರ ನಿಂತದ್ದು ಈ ಭಾರೀ ಅಂತರದ ಗೆಲುವಿಗೆ ಕಾರಣ ಎಂದು ಹೇಳಬಹುದು.

ಮತಗಳ ಅಂತರ ‘ಲಕ್ಷಾಂತರ’: ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 5 ಬಾರಿ ಚುನಾಯಿತರಾದದ್ದು ಕಾಂಗ್ರೆಸ್‌ ನಾಯಕ ಆಸ್ಕರ್‌ ಫೆರ್ನಾಂಡಿಸ್‌ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಆಸ್ಕರ್‌ ಮೂರು ಬಾರಿ, ಟಿ.ಎ.ಪೈ 1 ಬಾರಿ ಗೆಲುವು ಸಾಧಿಸಿದ್ದರು. ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಡಿ.ಎಂ. ಪುಟ್ಟೇಗೌಡರು ಎರಡು ಬಾರಿ, ಡಿ.ಕೆ. ತಾರಾದೇವಿಯವರು 1 ಬಾರಿ ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಈ ದಾಖಲೆಗಳನ್ನು ಶೋಭಾ ಕರಂದ್ಲಾಜೆ ಮುರಿದಿದ್ದಾರೆ.

ಕಳೆದ ಬಾರಿಯ ದಾಖಲೆ ಪತನ: 2014ರ ಲೋಕಸಭಾ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ 5,81,168 ಮತ ಗಳಿಸಿದ್ದು, ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆಯವರು 3,99,525 ಮತ ಗಳಿಸಿದ್ದರು. ಈ ಮೂಲಕ 1,81,643 ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದರು.

ವಿಧಾನಸಭೆವಾರು ಗಳಿಕೆ ಕೂಡ ಹೆಚ್ಚಳ: ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ತರಿಕೆರೆ ವಿಧಾನಸಭಾ ಕ್ಷೇತ್ರಗಳಲ್ಲೂ ಮತಗಳಿಕೆ ದಾಖಲೆ ಮಟ್ಟಕ್ಕೆ ತಲುಪಿದೆ.

Advertisement

ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅತ್ಯಧಿಕ ಮತಗಳ ಅಂತರದಲ್ಲಿ ಜಯ ಗಳಿಸಿದ್ದು, ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದೆ. ಉಡುಪಿ ಲೋಕಸಭಾ ಕ್ಷೇತ್ರಕ್ಕೆ 1951ರಿಂದ ಇದುವರೆಗೆ ನಡೆದ 17 ಲೋಕಸಭಾ ಚುನಾವಣೆಗಳಲ್ಲಿ ಮತ್ತು ಚಿಕ್ಕಮಗಳೂರು ಕ್ಷೇತ್ರ ಹಾಸನದಿಂದ ಬೇರ್ಪಟ್ಟು 1967ರಿಂದ ಸ್ವತಂತ್ರ ಕ್ಷೇತ್ರವಾಗಿ 2009ರ ವರೆಗೆ ನಡೆದ 13 ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ದಾಖಲೆಯ ಅಂತರದಲ್ಲಿ ವಿಜಯ ಸಾಧಿಸಿದ್ದಾರೆ.

ಈ ಮೂಲಕ ಮೋದಿ ಅಲೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲೂ ಬಿಜೆಪಿಯ ಕೈ ಹಿಡಿದಿದೆ. ಬಿಜೆಪಿ ನಾಯಕರ ಒಗ್ಗಟ್ಟು, ಕಾರ್ಯಕರ್ತರ ಹುಮ್ಮಸ್ಸು, ಯುವ ಮತದಾರರು ಮೋದಿ ಪರ ನಿಂತದ್ದು ಈ ಭಾರೀ ಅಂತರದ ಗೆಲುವಿಗೆ ಕಾರಣ ಎಂದು ಹೇಳಬಹುದು.

ಮತಗಳ ಅಂತರ ‘ಲಕ್ಷಾಂತರ’: ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 5 ಬಾರಿ ಚುನಾಯಿತರಾದದ್ದು ಕಾಂಗ್ರೆಸ್‌ ನಾಯಕ ಆಸ್ಕರ್‌ ಫೆರ್ನಾಂಡಿಸ್‌ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಆಸ್ಕರ್‌ ಮೂರು ಬಾರಿ, ಟಿ.ಎ.ಪೈ 1 ಬಾರಿ ಗೆಲುವು ಸಾಧಿಸಿದ್ದರು. ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಡಿ.ಎಂ. ಪುಟ್ಟೇಗೌಡರು ಎರಡು ಬಾರಿ, ಡಿ.ಕೆ. ತಾರಾದೇವಿಯವರು 1 ಬಾರಿ ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಈ ದಾಖಲೆಗಳನ್ನು ಶೋಭಾ ಕರಂದ್ಲಾಜೆ ಮುರಿದಿದ್ದಾರೆ.

ಕಳೆದ ಬಾರಿಯ ದಾಖಲೆ ಪತನ: 2014ರ ಲೋಕಸಭಾ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ 5,81,168 ಮತ ಗಳಿಸಿದ್ದು, ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್‌ ಹೆಗ್ಡೆಯವರು 3,99,525 ಮತ ಗಳಿಸಿದ್ದರು. ಈ ಮೂಲಕ 1,81,643 ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದರು.

ವಿಧಾನಸಭೆವಾರು ಗಳಿಕೆ ಕೂಡ ಹೆಚ್ಚಳ: ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಶೃಂಗೇರಿ, ಮೂಡಿಗೆರೆ, ಚಿಕ್ಕಮಗಳೂರು, ತರಿಕೆರೆ ವಿಧಾನಸಭಾ ಕ್ಷೇತ್ರಗಳಲ್ಲೂ ಮತಗಳಿಕೆ ದಾಖಲೆ ಮಟ್ಟಕ್ಕೆ ತಲುಪಿದೆ.

ದಾಖಲೆ ಅಂತರ: 2014ರ ಲೋಕಸಭಾ ಚುನಾವಣೆಯಲ್ಲಿ 1,81,643 ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದ ಶೋಭಾ ಕರಂದ್ಲಾಜೆಯವರ ಗೆಲುವಿನ ಅಂತರ ಈ ಬಾರಿ 3 ಪಟ್ಟು ಹೆಚ್ಚಳವಾಗಿರುವುದು ವಿಶೇಷ. ಪ್ರತಿಸ್ಪರ್ಧಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರಿಗಿಂತ ಸುಮಾರು 3.45 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.

ಫ‌ಲ ನೀಡದ ಮೈತ್ರಿ ಅಭ್ಯರ್ಥಿ: ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ ಕಣವಾಗಿದ್ದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಇಲ್ಲದಿರುವುದರಿಂದ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವೆಂದೇ ಹೇಳಲಾಗುತ್ತಿತ್ತು. ಆದರೆ ಇಷ್ಟು ಅಂತರದ ಗೆಲವು ಸಾಧಿಸಿರುವುದು ನಿಜಕ್ಕೂ ಬಿಜೆಪಿ ಪಾಳಯದಲ್ಲಿ ಸಂತಸ ಮನೆಮಾಡಿದೆ. ಈ ಭಾಗದಲ್ಲಿ ಜೆಡಿಎಸ್‌ ಪಕ್ಷ ಅಷ್ಟೊಂದು ಪ್ರಬಲವಾಗಿಲ್ಲದ ಕಾರಣ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಕಣಕ್ಕಿಳಿದಿದ್ದರು.

2014ರ ಲೋಕಸಭಾ ಚುನಾವಣೆಯಲ್ಲಿ 1,81,643 ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದ ಶೋಭಾ ಕರಂದ್ಲಾಜೆಯವರ ಗೆಲುವಿನ ಅಂತರ ಈ ಬಾರಿ 3 ಪಟ್ಟು ಹೆಚ್ಚಳವಾಗಿರುವುದು ವಿಶೇಷ. ಪ್ರತಿಸ್ಪರ್ಧಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರಿಗಿಂತ ಸುಮಾರು 3.45 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.

ಫ‌ಲ ನೀಡದ ಮೈತ್ರಿ ಅಭ್ಯರ್ಥಿ: ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ ಕಣವಾಗಿದ್ದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಇಲ್ಲದಿರುವುದರಿಂದ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವೆಂದೇ ಹೇಳಲಾಗುತ್ತಿತ್ತು. ಆದರೆ ಇಷ್ಟು ಅಂತರದ ಗೆಲವು ಸಾಧಿಸಿರುವುದು ನಿಜಕ್ಕೂ ಬಿಜೆಪಿ ಪಾಳಯದಲ್ಲಿ ಸಂತಸ ಮನೆಮಾಡಿದೆ. ಈ ಭಾಗದಲ್ಲಿ ಜೆಡಿಎಸ್‌ ಪಕ್ಷ ಅಷ್ಟೊಂದು ಪ್ರಬಲವಾಗಿಲ್ಲದ ಕಾರಣ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಕಣಕ್ಕಿಳಿದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next