Advertisement

ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

03:21 PM May 24, 2019 | Team Udayavani |

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ದೇಶದಲ್ಲಿ ದೊರೆತ ಅಭೂತಪೂರ್ವ ಗೆಲುವಿನಿಂದಾಗಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.

Advertisement

ನಗರದ ಜಿಲ್ಲಾ ಬಿಜೆಪಿ ಕಚೇರಿಯಿಂದ ಪಕ್ಷದ ಬಾವುಟ, ಪ್ರಧಾನಿ ನರೇಂದ್ರ ಮೋದಿ ಅವರ ದೊಡ್ಡ ಭಾವಚಿತ್ರವಿದ್ದ ಕಟೌಟನ್ನು ಹಿಡಿದು ಮೆರವಣಿಗೆ ಹೊರಟ ಕಾರ್ಯಕರ್ತರು ಬಿಜೆಪಿ ಹಾಗೂ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತ ಆಜಾದ್‌ ಪಾರ್ಕ್‌ ವೃತ್ತವನ್ನು ತಲುಪಿದರು.

ಆಜಾದ್‌ ಪಾರ್ಕ್‌ ವೃತ್ತದಲ್ಲಿ ನೆರೆದ ಕಾರ್ಯಕರ್ತರು ಪಕ್ಷದ ಪರ ಘೋಷಣೆ ಕೂಗುತ್ತ ವೃತ್ತದಲ್ಲಿ ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿದರು. ಬಿಜೆಪಿ ಪರ ಘೋಷಣೆ ಕೂಗುತ್ತಲೇ ವೃತ್ತದಲ್ಲಿ ನೆರೆದಿದ್ದ ಸಾರ್ವಜನಿಕರು ಹಾಗೂ ವಾಹನಗಳಲ್ಲಿ ತೆರಳುತ್ತಿದ್ದವರಿಗೆ ಸಿಹಿ ವಿತರಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ಜಿಲ್ಲಾ ಬಿಜೆಪಿ ವಕ್ತಾರ ಸಿ.ಎಚ್.ಲೋಕೇಶ್‌, ನಗರಸಭೆ ಮಾಜಿ ಅಧ್ಯಕ್ಷರಾದ ದೇವರಾಜ ಶೆಟ್ಟಿ, ಮುತ್ತಯ್ಯ, ಬಿ.ರಾಜಪ್ಪ, ವಿಕ್ರಮ್‌, ವೀಣಾಶೆಟ್ಟಿ ಇತರರು ಇದ್ದರು.

ಸ್ವಚ್ಛತೆ: ನಗರದ ಆಜಾದ್‌ ಪಾರ್ಕ್‌ ವೃತ್ತದಲ್ಲಿ ವಿಜಯೋತ್ಸವದ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ನಂತರ ಕೆಲ ಬಿಜೆಪಿ ಕಾರ್ಯಕರ್ತರುಗಳೇ ಕೈಯಲ್ಲಿ ಪೊರಕೆ ಹಿಡಿದು ರಸ್ತೆಯಲ್ಲಿ ಬಿದ್ದಿದ್ದ ಪಟಾಕಿ ಗುಡಿಸಿ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು

Advertisement
Advertisement

Udayavani is now on Telegram. Click here to join our channel and stay updated with the latest news.

Next