Advertisement

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

11:32 AM Aug 08, 2022 | Team Udayavani |

ಚಿಕ್ಕಮಗಳೂರು: ಗೋ ಹತ್ಯೆ ತಡೆಯುವ ನಿಟ್ಟಿನಲ್ಲಿ ಚಿಕ್ಕಮಗಳೂರು ನಗರಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಇದೀಗ ನಗರದಲ್ಲಿ ಉತ್ತರ ಪ್ರದೇಶದ ಯೋಗಿ ಮಾದರಿ ಅಳವಡಿಸಿಕೊಂಡು ಗೋ ಹತ್ಯೆ ತಡೆಯುವ ಪ್ರಯತ್ನ ಮಾಡುತ್ತಿದೆ.

Advertisement

ಗೋ ಹತ್ಯೆ, ಗೋ ಮಾಂಸ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ‌ ನಗರಸಭೆ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯ ವಿದ್ಯುತ್, ನೀರಿನ ಸಂಪರ್ಕ ಬಂದ್ ಮಾಡಿದ್ದಾರೆ.

ಇದನ್ನೂ ಓದಿ:ಬಿಬಿಎಂಪಿ‌ ಮೀಸಲು: 187 ವಾರ್ಡ್ ನಲ್ಲಿ ನಿಯಮ ಬಾಹಿರ? ಕಾಂಗ್ರೆಸ್ ಆರೋಪವೇನು?

ಚಿಕ್ಕಮಗಳೂರು ನಗರಸಭೆಯಿಂದ ನಿರಂತರವಾಗಿ ಗೋಮಾಂಸ ಅಡ್ಡೆಗಳ ಮೇಲೆ‌‌ ದಾಳಿಯಾಗುತ್ತಿದ್ದು, ಹಲವೆಡೆ ಗೋಮಾಂಸ ವಶಕ್ಕೆ ಪಡೆದಿದ್ದರು. ಇದೀಗ ಅವರ ಮನೆಯ ದಾಖಲೆಗಳನ್ನು ರದ್ದು ಮಾಡಿ, ನಗರಸಭೆ ಆಸ್ತಿ ಎಂದು ಪರಿವರ್ತನೆ ಮಾಡಲು ಸಿದ್ದತೆ ಮಾಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next