Advertisement

ಗೋಮಾಂಸ ಮಾರುವ ಮನೆ ಇನ್ನು ನಗರಸಭೆ ಆಸ್ತಿ!

12:39 PM Aug 09, 2022 | Team Udayavani |

ಚಿಕ್ಕಮಗಳೂರು: ಗೋಹತ್ಯೆ ತಡೆಯುವ ನಿಟ್ಟಿನಲ್ಲಿ ಇಲ್ಲಿನ ನಗರಸಭೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ಗೋಮಾಂಸ ಮಾರಾಟ ಮಾಡುತ್ತಿದ್ದ ಮನೆಗೆ ನಗರ ಸಭೆ ಅಧಿಕಾರಿಗಳು ದಾಳಿ ನಡೆಸಿ ವಿದ್ಯುತ್‌ ಮತ್ತು ನೀರಿನ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಅಷ್ಟೇ ಅಲ್ಲ, ಮನೆಯ ದಾಖಲೆಗಳನ್ನು ರದ್ದು ಮಾಡಿ ನಗರಸಭೆ ಆಸ್ತಿ ಎಂದು ಪರಿವರ್ತಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Advertisement

ನಗರಸಭೆಯು ಈಗಾಗಲೇ ಅಕ್ರಮ ಕಸಾಯಿ ಖಾನೆಗಳ ಮೇಲೆ ದಾಳಿ ನಡೆಸಿ ಶೆಡ್‌ಗಳಿಗೆ ನೋಟಿಸ್‌ ಅಂಟಿಸಿ ಮುನ್ನೆಚ್ಚರಿಕೆ ನೀಡಿತ್ತು. ಅಕ್ರಮ ಶೆಡ್‌ಗಳನ್ನು ತೆರವುಗೊಳಿಸಿತ್ತು. ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಿದಲ್ಲಿ ಅಂಥವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್‌ ಎಚ್ಚರಿಕೆ ನೀಡಿದ್ದರು.

ಪೊಲೀಸ್‌ ಅಧಿಕಾರಿಗಳು ಗೋಮಾಂಸ ಮಾರಾಟಗಾರರ ಪರೇಡ್‌ ನಡೆಸಿ ಎಚ್ಚರಿಸಿದ್ದರು. ನಗರಸಭೆ ಅಧಿಕಾರಿಗಳು ರವಿವಾರ ಯಶ್‌ಪಾಲ್‌ ಎಂಬವರ ಮನೆ ಮೇಲೆ ದಾಳಿ ಮಾಡಿ ಗೋಮಾಂಸ ವಶಪಡಿಸಿಕೊಂಡಿದ್ದಾರೆ. ವಿದ್ಯುತ್‌, ನೀರಿನ ಸಂಪರ್ಕ ಕಡಿತಗೊಳಿಸಿದ್ದಾರೆ. ಅಲ್ಲದೆ ಮನೆಯ ದಾಖಲೆಗಳನ್ನು ರದ್ದು ಮಾಡಿ ನಗರಸಭೆ ಆಸ್ತಿ ಎಂದು ಪರಿವರ್ತನೆ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next