Advertisement

ಶೃಂಗೇರಿ ಮಠದಲ್ಲಿ ಶ್ರೀಕೃಷ್ಣನಿಗೆ ಪೂಜೆ

06:44 PM Aug 31, 2021 | Team Udayavani |

ಶೃಂಗೇರಿ : ಶ್ರಾವಣ ಮಾಸದ ಅಷ್ಟಮಿ ದಿನವಾದ ಸೋಮವಾರ ಶ್ರೀಮಠದ ಗುರುಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ನಡೆಯಿತು. ಬೆಳಗ್ಗೆ ಶ್ರೀ ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಚಾತುರ್ಮಾಸ್ಯ ವ್ರತದಲ್ಲಿದ್ದು, ಶ್ರೀಕೃಷ್ಣನಿಗೆ ಪೂಜೆ ಸಲ್ಲಿಸಿದರು.

Advertisement

ಸ್ವಾಮಿಗೆ ಶ್ರೀಸೂಕ್ತ ಪೂಜೆಯೊಂದಿಗೆ ಪಂಚಾಮೃತಾಭಿಷೇಕ, ಮಹಾಮಂಗಳಾರತಿ ನಡೆಯಿತು. ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಪಟ್ಟಣದ ಮಲ್ಲಪ್ಪನ ಬೀದಿಯಲ್ಲಿರುವ ಶ್ರೀ ರಾಜಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ಅಷ್ಟಮಿಯ ವಿಶೇಷ ಪೂಜೆ ನಡೆಯಿತು.

ಸ್ವಾಮಿಗೆ ಬೆಣ್ಣೆ ಸೇವೆ, ತುಳಸಿ ಅರ್ಚನೆ, ವೀಳ್ಯದೆಲೆ ಹಾಗೂ ಹೂವಿನ ಅಲಂಕಾರ ಮಾಡಲಾಗಿತ್ತು. ಭಕ್ತಾದಿಗಳು ಸ್ವಾಮಿಯ ಸನ್ನಿಧಿಗೆ ಆಗಮಿಸಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಆನೆಗುಂದ ಶ್ರೀ ವೇಣುಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದಲ್ಲೂ ಸ್ವಾಮಿಗೆ ವಿಶೇಷ ಪೂಜೆ ನಡೆಸಲಾಯಿತು. ಅರ್ಚಕ ವಸಂತ ಭಟ್‌ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ರಾತ್ರಿ ಭಜನೆ, ಮಹಾಮಂಗಳಾರತಿ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next