Advertisement

Chikkamagaluru; ದತ್ತಪೀಠದಲ್ಲಿ ಹೋಮಕ್ಕೆ ಸಿಗದ ಅವಕಾಶ: ವಿಹಿಂಪ, ಬಜರಂಗ ದಳ ಪ್ರತಿಭಟನೆ

01:06 PM Jan 22, 2024 | Team Udayavani |

ಚಿಕ್ಕಮಗಳೂರು: ದತ್ತಪೀಠದಲ್ಲಿ ಹೋಮ‌ಹವನ ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹೋಮ ಕುಂಡ, ಇರಿಸಿ ಭಜನೆ ಪಠಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

Advertisement

ಅಯೋಧ್ಯೆ ಶ್ರೀ ರಾಮಮಂದಿರ ದಲ್ಲಿ  ಶ್ರೀರಾಮ‌ ಪ್ರತಿಷ್ಠಾಪನೆ ಕಾರ್ಯ ನೆರವೇರುತ್ತಿದೆ. ಈ ಹಿನ್ನಲೆಯಲ್ಲಿ ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಹೋಮ ಹವನಗಳನ್ನು ನಡೆ ಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣ ದಲ್ಲಿ ಪ್ರತಿಭಟನೆ ನಡೆಸಲು ನಿಷೇಧವಿದ್ದು,  ನಿಷೇಧದ ನಡುವೆ ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಪ್ರತಿಭಟನೆಯಲ್ಲಿ ಶ್ರೀಕಾಂತ್ ಪೈ, ರಂಗನಾಥ, ಸಂತೋಷ ಕೊಟ್ಯಾನ್ ಸೇರಿದಂತೆ ಅನೇಕರು  ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next