Advertisement

ಚಿಕ್ಕಮಗಳೂರು: ವೃದ್ಧೆಯನ್ನು ಹತ್ಯೆ ಮಾಡಿ ಚಿನ್ನದ ಸರ ದೋಚಿದ ದುಷ್ಕರ್ಮಿಗಳು

07:36 PM Sep 24, 2020 | Mithun PG |

ಚಿಕ್ಕಮಗಳೂರು: ಚಿನ್ನದ ಸರ ದೋಚುವ ಭರದಲ್ಲಿ ದುಷ್ಕರ್ಮಿಗಳು ವೃದ್ಧೆಯ ತಲೆಗೆ ಮರದ ತುಂಡಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಅಜ್ಜಂಪುರ ಪಟ್ಟಣ ಶಿವಾನಂದಾಶ್ರಮದಲ್ಲಿ ಗುರುವಾರ ನಡೆದಿದೆ.

Advertisement

ಮೃತ ವೃದ್ಧೆ ಪಟ್ಟಣದ ರೈಲ್ವೇ ನಿಲ್ದಾಣ ಸಮೀಪದ ನಿವಾಸಿ ನಾಗರತ್ನ (70) ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಮನೆ ಸಮೀಪದ ಶಿವಾನಂದಾಶ್ರಮ ಮಠದ ಆವರಣದಲ್ಲಿದ್ದ ದೇವಾಲಯಕ್ಕೆ ವಾಯುವಿಹಾರಕ್ಕೆ ಆಗಮಿಸಿದ್ದ ವೇಳೆ ವೃದ್ಧೆ ನಾಗರತ್ನ ದೇವರ ದರ್ಶನಕ್ಕೆಂದು ಹೋಗಿದ್ದರು. ಈ ವೇಳೆ ವೃದ್ಧೆಯ ತಲೆಗೆ ಮರದ ತುಂಡಿನಿಂದ ಹೊಡೆದಿದ್ದಾರೆ.

ತಲೆಗೆ ಭಾರೀ ಪೆಟ್ಟು ಬಿದ್ದ ಪರಿಣಾಮ ವೃದ್ಧೆ ದೇವಾಲಯದ ಆವರಣದಲ್ಲೇ ಕುಸಿದ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಅಪಹರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಅದೇ ದಾರಿಯಲ್ಲಿ ಸಾಗುತ್ತಿದ್ದವರು ವೃದ್ಧೆಯನ್ನು ಗಮನಿಸಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಬಳಿಕ ವೃದ್ಧೆಯನ್ನು ಅಜ್ಜಂಪುರ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ದಾರಿ ಮಧ್ಯೆ ವೃದ್ಧೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಘಟನೆ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಳಗ್ಗೆ ಎಎಸ್ಪಿ ಶೃತಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಂಜೆ ವೇಳೆ ಎಸ್ಪಿ ಹಕಾಯ್ ಅಕ್ಷಯ್ ಮಚ್ಚೀಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next