Advertisement

ಶಂಕರಪುರ ರಸ್ತೆ ಚರಂಡಿ ಅವೈಜ್ಞಾನಿಕ ನಿರ್ಮಾಣಕ್ಕೆ ವಿರೋಧ

03:12 PM Feb 17, 2020 | Naveen |

ಚಿಕ್ಕಮಗಳೂರು: ದೀಪಾ ನರ್ಸಿಂಗ್‌ ಹೋಮ್‌ ಸಮೀಪದ ಶಂಕರಪುರ ರಸ್ತೆ ಚರಂಡಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ದಲಿತ ಜನ ಸೇನೆಯ ಜಿಲ್ಲಾಧ್ಯಕ್ಷ ಅನಿಲ್‌ ಆನಂದ್‌ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಅವರಿಗೆ ಮನವಿ ಸಲ್ಲಿಸಿದರು.

Advertisement

ದೀಪಾ ನರ್ಸಿಂಗ್‌ ಹೋಂ ಮುಖ್ಯರಸ್ತೆ ಹಾಗೂ ಚರಂಡಿಯನ್ನು ನಗರಸಭೆ ದುರಸ್ತಿ ಮಾಡುತ್ತಿದೆ. ಆದರೆ, ಗುತ್ತಿಗೆದಾರ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡುತ್ತಿದ್ದು, ಶಂಕರಪುರ 4ನೇ ಹಾಗೂ 5ನೇ ತಿರುವುಗಳಲ್ಲಿ ನೀರು ಒಳ ರಸ್ತೆಗಳಲ್ಲಿ ನುಗ್ಗುವ ರೀತಿ ಚರಂಡಿ ನಿರ್ಮಾಣ ಮಾಡಲಾಗಿದೆ ಎಂದು ದೂರಿದರು.

ಚರಂಡಿ ನಿರ್ಮಾಣಕ್ಕೆ ಸಂದರ್ಭದಲ್ಲಿ ಕುಡಿಯುವ ನೀರಿನ ಪೈಪ್‌ ತುಂಡಾಗಿ ಬಡಾವಣೆಯ ಜನರು ಕುಡಿಯುವ ನೀರಿನ ಬವಣೆ ಅನುಭವಿಸುತ್ತಿದ್ದಾರೆ. ಮನೆಗಳಿಗೆ ಸರಬರಾಜಾಗುತ್ತಿರುವ ನೀರು ಕಲುಷಿತಗೊಂಡು ಬಡಾವಣೆಯ ಜನರಲ್ಲಿ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ. 6
ತಿಂಗಳಿಂದ ಅಮೃತ್‌ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ನಡೆಯುತ್ತಿದ್ದು, ಈ ಬಡಾವಣೆಯ ನಾಗರಿಕರು ನೀರು ಮತ್ತು ರಸ್ತೆಯ ಸೌಕರ್ಯವಿಲ್ಲದೇ ಜೀವನ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಚರಂಡಿ, ರಸ್ತೆ ಹಾಗೂ ಇಲ್ಲಿನ ಕಲುಷಿತ ವಾತಾವರಣದಿಂದ ಉಸಿರುಗಟ್ಟುವ ಸ್ಥಿತಿ ನಿರ್ಮಾಣವಾಗಿದ್ದು ಗುತ್ತಿಗೆದಾರರು, ಅಧಿಕಾರಿಗಳು, ಜನಪ್ರತಿನಿಧಿಗಳ  ಜವಾಬ್ದಾರಿತನದಿಂದ ಒಂದು ತಿಂಗಳು ಕಳೆದರು ತಿಂಗಳಾದರು ಚರಂಡಿಯ ಒಂದು ಬದಿಯ ಸ್ಲ್ಯಾಬ್‌ ನಿರ್ಮಿಸಲು
ಸಾಧ್ಯವಾಗಿಲ್ಲ. ಈ ರಸ್ತೆಯಲ್ಲಿ ವೃದ್ಧರು, ವಿಕಲಚೇತನರು, ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆಗೆ ಸಾಗುವ ಆ್ಯಂಬುಲೆನ್ಸ್‌ಗಳು ಈ ಮಾರ್ಗವನ್ನು ಓಡಾಡುವರಾಗಿದ್ದು, ಗುತ್ತಿಗೆದಾರ ಕಾಮಗಾರಿ ವಿಳಂಬ ಮಾಡುತ್ತಿರುವುದರಿಂದ ಬಡಾವಣೆಯ ನಾಗರಿಕರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದರು.

ಅಮೃತ್‌ ಯೋಜನೆಗಾಗಿ ರಸ್ತೆ ಗುಂಡಿ ಅಗೆದ ಗುತ್ತಿಗೆದಾರರು ಅದನ್ನು ಪುನರ್‌ ನಿರ್ಮಿಸದೇ ಸಾರ್ವಜನಿಕ ಓಡಾಟಕ್ಕೂ ತೊಂದರೆಯಾಗಿದೆ. ಶಂಕರಪುರದ ಬಡಾವಣೆಯ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಒತ್ತಾಯಿಸಿದರು.

Advertisement

ಮನವಿ ಪತ್ರ ನೀಡಿ ನಗರಸಭೆ ಎ.ಇ.ಇ ಗವಿರಂಗಪ್ಪರವರೊಂದಿಗೆ ಸ್ಥಳ ಪರಶೀಲನೆ ನಡೆಸಲಾಯಿತು. ಇನ್ನು ಒಂದು ತಿಂಗಳ ಒಳಗಾಗಿ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ದಲಿತ ಜನ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಶ್ವನಾಥ, ಜಿಲ್ಲಾ ಮಹಿಳಾ ಅಧ್ಯಕ್ಷೆ ಸ್ವರ್ಣಗೌರಿ, ಶ್ರೀರಾಮ್‌ ಸೇನೆ ಜಿಲ್ಲಾಧ್ಯಕ್ಷರಾದ ರಂಜಿತ್‌ ಶೆಟ್ಟಿ, ಸ್ವಸ್ಥಭೂಮಿ ಪ್ರತಿಷ್ಠಾನ ಗೌರವ ಅಧ್ಯಕ್ಷ ಗುರುಮೂರ್ತಿ, ಸವಿತಾ ಸಮಾಜ ಮೀಸಲಾತಿ ಒಕ್ಕೂಟದ ತಾಲೂಕು ಅಧ್ಯಕ್ಷ ಜೆ. ಸತ್ಯನಾರಾಯಣ, ಶಂಕರಪುರ ಲಕ್ಷ್ಮೀಶ ನಗರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಆನಂದ್‌ ಮೂರ್ತಿ, ತಿಲಕ್‌ ದತ್‌, ಮಂಜುನಾಥ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next