Advertisement

Road mishap: ವಿದ್ಯಾರ್ಥಿಗಳಿಗೆ ಬಸ್ ಡಿಕ್ಕಿ ಹೊಡೆದ ಪ್ರಕರಣ: ಓರ್ವ ವಿದ್ಯಾರ್ಥಿನಿ ಮೃತ್ಯು

01:18 PM Sep 07, 2023 | Team Udayavani |

ಚಿಕ್ಕಮಗಳೂರು: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಖಾಸಗಿ ಬಸ್ಸೊಂದು ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರಲ್ಲಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

Advertisement

ಮೃತ ವಿದ್ಯಾರ್ಥಿನಿಯನ್ನು ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ತುಳಸಿ(15) ಎನ್ನಲಾಗಿದೆ.

ತುಳಸಿ, ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು ಎನ್ನಲಾಗಿದ್ದು ಎಂದಿನಂತೆ ಶಾಲೆಗೆ ತೆರಳಲು ಬಸ್ಸಿಗಾಗಿ ಇತರ ವಿದ್ಯಾರ್ಥಿನಿಯರ ಜೊತೆ ಕಾಯುತ್ತಿದ್ದ ವೇಳೆ ಅತಿವೇಗವಾಗಿ ಬಂದ ಬಸ್ಸು ವಿದ್ಯಾರ್ಥಿನಿಯರ ಮೇಲೆ ಹರಿದು ತುಳಸಿ ಸೇರಿ ಇಬ್ಬರು ಗಂಭೀರ ಗಾಯಗೊಂಡಿದ್ದರು. ಕೂಡಲೇ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಿಸದೆ ತುಳಸಿ ಕೊನೆಯುಸಿರೆಳೆದಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ತುಳಸಿ ತಂದೆ – ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್

Advertisement
Advertisement

Udayavani is now on Telegram. Click here to join our channel and stay updated with the latest news.

Next