Advertisement

ಚಿಕ್ಕಮಗಳೂರು ಜಿಲ್ಲಾ ಪ್ರವಾಸಿ ತಾಣಗಳ ನಿರ್ಬಂಧ ತೆರವು! ಷರತ್ತು ಅನ್ವಯ

08:59 PM Aug 29, 2020 | sudhir |

ಚಿಕ್ಕಮಗಳೂರು : ಕೋವಿಡ್ ಹಿನ್ನೆಲೆ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸುವ ಮೂಲಕ ಷರತ್ತು ಬದ್ದ ಅನುಮತಿಯನ್ನು ನೀಡಿದೆ.

Advertisement

ಜಿಲ್ಲೆಗೆ ಬರುವ ಪ್ರವಾಸಿಗರು ಕಾರು, ಜೀಪ್‌, ದ್ವಿಚಕ್ರ ವಾಹನಗಳಲ್ಲಿ ತೆರಳಲು ಅವಕಾಶ ನೀಡಿದ್ದು ಖಾಸಗಿ ಬಸ್ಸುಗಳಲ್ಲಿ ಬರುವ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದಿಲ್ಲ ಜೊತೆಗೆ ಪ್ರವಾಸಿ ತಾಣಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸ ಕೈಗೊಳ್ಳುವ ಪ್ರವಾಸಿಗಳು ಜಿಲ್ಲೆಯ ಪ್ರಕೃತಿ ಸೌಂದರ್ಯವನ್ನು ಅನುಭವಿಸಲು ಅವಕಾಶ ಜಿಲ್ಲಾಡಳಿತ ಅವಕಾಶ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next