Advertisement

Chikkamagaluru:ಪೇಂಟಿಂಗ್ ಮಾಡುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಮೃತ್ಯು

07:31 PM Jan 17, 2024 | Team Udayavani |

ಚಿಕ್ಕಮಗಳೂರು: ಕಟ್ಟಡವೊಂದರ ಪೇಂಟಿಂಗ್ ಮಾಡುವ ವೇಳೆ ಮೂರನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿರುವ ಘಟನೆ ನಗರದ ಮಾರ್ಕೇಟ್ ರಸ್ತೆಯಲ್ಲಿ ನಡೆದಿದೆ.

Advertisement

ರಘು ಸ್ಟಿಕರ್ಸ್ ನೂತನ ಕಟ್ಟಡಕ್ಕೆ ಪೇಂಟಿಂಗ್ ಮಾಡುವ ವೇಳೆ ಘಟನೆ ನಡೆದಿದೆ. ಕಟ್ಟಡಕ್ಕೆ ಪೇಂಟಿಂಗ್ ಮಾಡುವ ವೇಳೆ ಹಗ್ಗ ತುಂಡಾಗಿ ಪೈಂಟರ್ ಜಗದೀಶ್ ಮೂರನೇ ಮಹಡಿಯಿಂದ ಬಿದ್ದು ತೀವ್ರ ರಸ್ತಸ್ರಾವ ವಾಗಿದ್ದು, ಹಾಸನ ಜಿಲ್ಲೆ ಆಸ್ಪತ್ರೆಗೆ ಕರದೊಯ್ಯುವ ವೇಳೆ ಮೃತಪಟ್ಟಿದ್ದಾನೆ.

ಯಾವುದೇ ಸುರಕ್ಷತೆ ಇಲ್ಲದೆ ಕಟ್ಟಡ ಏರಿ ಕೆಲಸ ಮಾಡುವ ವೇಳೆ ಏಕಾಏಕಿ ಹಗ್ಗ ತುಂಡಾಗಿ ಅವಘಡ ಸಂಭವಿಸಿದೆ. ಚಿಕ್ಕಮಗಳೂರು ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಜಗದೀಶ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಲಾಗಿದೆ ಜತೆಗೆ ಕಾರ್ಮಿಕರಿಗೆ ಭದ್ರತೆ ಪರಿಕರಗಳನ್ನು ಒದಗಿಸುವಂತೆ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next