Advertisement

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

12:12 AM Mar 19, 2024 | Team Udayavani |

ಯಮಕನಮರಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರಕ್ಕೆ ಸ್ಪರ್ಧಾಕಾಂಕ್ಷಿ ಆಗಿರುವ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಪಾಶ್ಚಾಪೂರ ಜಿ.ಪಂ. ಕ್ಷೇತ್ರ ವ್ಯಾಪ್ತಿಯ ಪಾಶ್ಚಾಪೂರ, ಬಸ್ಸಾಪೂರ, ಕರಗುಪ್ಪಿ, ಯಲ್ಲಾಪೂರ, ಶಾಹಾಬಂದರ ಸರ್ಕಲ್‌ ಮೊದಲಾದೆಡೆ ಕಾಂಗ್ರೆಸ್‌ ಕಾರ್ಯಕರ್ತರ ಜತೆ ಚರ್ಚಿಸಿದರು.

Advertisement

ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ನನ್ನನ್ನು ಅಭ್ಯರ್ಥಿಯಾಗಿ ಘೋಷಿಸಿದರೆ ತಂದೆಯ ಮಾರ್ಗದರ್ಶನದಲ್ಲಿ ಸ್ಪರ್ಧಿಸುತ್ತೇನೆ. 2-3 ದಿನಗಳಲ್ಲಿ ಅಧಿಕೃತವಾಗಿ ಘೋಷಣೆಯಾಗಲಿದೆ. ಕಾರ್ಯಕರ್ತರೊಂದಿಗೆ ಚರ್ಚಿಸಿ ಅಭಿಪ್ರಾಯ ತಿಳಿಯಲು ಆಗಮಿಸಿದ್ದೇನೆ. ಅವರ ಒಪ್ಪಿಗೆ ಕೂಡ ಮುಖ್ಯವಾಗಿದೆ ಎಂದರು.

3-4 ವರ್ಷಗಳಿಂದ ಕ್ಷೇತ್ರದ ಕಾರ್ಯಕ್ರಮಗಳಿಂದ ಅಂತರ ಕಾಪಾಡಿಕೊಂಡಿದ್ದ ಪ್ರಿಯಾಂಕಾ ಸೋಮವಾರ ದಿಢೀರನೇ ಪಾಶ್ಚಾಪೂರ ಜಿ.ಪಂ. ಕ್ಷೇತ್ರದ ಪಕ್ಷದ ಕಾರ್ಯಕರ್ತರ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next