Advertisement
ಒಂದೇ ಪಕ್ಷ, ಒಬ್ಬರನ್ನೇ ಸತತವಾಗಿ ಏಳು ಬಾರಿ ಲೋಕಸಭೆಗೆ ಆಯ್ಕೆ ಮಾಡಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮತದಾರರು ನಂತರದ ದಿನಗಳಲ್ಲಿ ವಿಭಿನ್ನ ಪಕ್ಷಗಳಿಂದ ಸ್ಪರ್ಧಿಸಿದ್ದರೂ ಒಬ್ಬರೇ ವ್ಯಕ್ತಿಯನ್ನು ಸತತ ಮೂರು ಬಾರಿ ಆಯ್ಕೆ ಮಾಡಿದ್ದರು. ಚಿಕ್ಕೋಡಿ ಕ್ಷೇತ್ರದಿಂದ ಸತತ ಏಳು ಬಾರಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ನ ಬಿ.ಶಂಕರಾನಂದ ಅವರು ದಾಖಲೆ ತೋರಿದ್ದರು. ಇದೇ ಕ್ಷೇತ್ರದಿಂದ ರಮೇಶ ಜಿಗಜಿಣಗಿ ಅವರು ಸತತ ಮೂರು ಬಾರಿ ವಿಭಿನ್ನ ಪಕ್ಷಗಳಿಂದ ಸ್ಪರ್ಧಿಸಿದ್ದರೂ ಗೆಲುವು ಸಾಧಿಸಿ ಮತ್ತೂಂದು ದಾಖಲೆ ಬರೆದಿದ್ದರು.
Related Articles
Advertisement
ಜನತಾ ಪರಿವಾರದ ಪ್ರಮುಖ ನಾಯಕರಲ್ಲೊಬ್ಬರಾಗಿದ್ದ ರಾಮಕೃಷ್ಣ ಹೆಗಡೆ ಅವರು ಜನತಾದಳದಿಂದ ಉಚ್ಛಾಟಿಸಿದ್ದರಿಂದ, ರಾಷ್ಟ್ರಮಟ್ಟದ ನಾಯಕರಾಗಿದ್ದ ರಾಮಕೃಷ್ಣ ಹೆಗಡೆುವರು 1997ರ ಫೆಬ್ರವರಿಯಲ್ಲಿ ಲೋಕಶಕ್ತಿ ಎಂಬ ಪಕ್ಷ ಸ್ಥಾಪಿಸಿದ್ದರು. ರಾಮಕೃಷ್ಣ ಹೆಗಡೆುವರ ಕಟ್ಟಾ ಬೆಂಬಲಿಗರಲ್ಲಿ ಒಬ್ಬರಾಗಿ ರಮೇಶ ಜಿಗಜಿಣಗಿ ಅವರು ಗುರುತಿಸಿಕೊಂಡಿದ್ದರು.
1998ರಲ್ಲಿ ಲೋಕಸಭೆಗೆ ನಡೆದ ಮಧ್ಯಂತರ ಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಿಂದ ಲೋಕಶಕ್ತಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಮೇಶ ಜಿಗಜಿಣಗಿ ಅವರು, ಬಿ.ಶಂಕರಾನಂದರನ್ನು ಸುಮಾರು 1,31,238 ಮತಗಳಿಂದ ಸೋಲಿಸುವ ಮೂಲಕ ಲೋಕಸಭೆ ಪ್ರವೇಶಿಸಿ ಗಮನ ಸೆಳೆದಿದ್ದರು. ಆಗ ಲೋಕಶಕ್ತಿ, ಎನ್ಡಿಎ ಪಕ್ಷದ ಅಂಗಪಕ್ಷವಾಗಿ ಕಾರ್ಯ ನಿರ್ವಹಿಸಿತ್ತು. ನಂತರದಲ್ಲಿ, ಜನತಾ ಪರಿವಾರ ಒಗ್ಗೂಡಿಕೆ ಯತ್ನದಲ್ಲಿ ಲೋಕಶಕ್ತಿ, ಸಂಯುಕ್ತ ಜನತಾದಳದಲ್ಲಿ ವಿಲೀನವಾಗಿತ್ತು. 1999ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಮೇಶ ಜಿಗಜಿಣಗಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸಂಯುಕ್ತ ಜನತಾದಳ ಆಭ್ಯರ್ಥಿಯಾಗಿ ಕಣಕ್ಕಿಳಿದು ಸತತ ಎರಡನೇ ಬಾರಿಗೆ ಗೆಲುವು ಕಂಡಿದ್ದರು.
ಬದಲಾದ ರಾಜಕೀಯ ಹಿನ್ನೆಲೆಯಲ್ಲಿ ರಮೇಶ ಜಿಗಜಿಣಗಿಯವರು ಬಿಜೆಪಿ ಸೇರಿ, 2004ರ ಲೋಕಸಭಾ ಚುನಾವಣೆಗೆ ಚಿಕ್ಕೋಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆಗಲೂ ಕ್ಷೇತ್ರದ ಮತದಾರರು ಅವರನ್ನು ಗೆಲ್ಲಿಸುವ ಮೂಲಕ ಹ್ಯಾಟ್ರಿಕ್ ಗೆಲುವಿನ ಸಾಧನೆ ತೋರುವಂತೆ ಮಾಡಿದ್ದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಬಿ.ಶಂಕರಾನಂದರನ್ನು ಬಿಟ್ಟರೆ, ಅತಿ ಹೆಚ್ಚು ಬಾರಿ ಈ ಕ್ಷೇತ್ರದಿಂದ ಆಯ್ಕೆಯಾದ ಕೀರ್ತಿ ರಮೇಶ ಜಿಗಜಿಣಗಿ ಅವರದ್ದಾಗಿದೆ. ಶಂಕರಾನಂದ ಅವರು ಸತತ ಏಳು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರೆ, ರಮೇಶ ಜಿಗಜಿಣಗಿ ಅವರು ಸತತ ಮೂರು ಬಾರಿ ಕ್ಷೇತ್ರ ಪ್ರತಿನಿಧಿಸಿದ್ದರು. ಪ್ರಸ್ತುತ ವಿಜಯಪುರ ಸಂಸದರಾಗಿರುವ ರಮೇಶ ಜಿಗಜಿಣಗಿ ಅವರು ಕೇಂದ್ರ ಸಚಿವರಾಗಿದ್ದಾರೆ.
ಅಮರೇಗೌಡ ಗೋನವಾರ