Advertisement

Chikkodi: ಕೌಟುಂಬಿಕ ಗಲಾಟೆಯಲ್ಲಿ ಓರ್ವನ ಕಿವಿ ಕತ್ತರಿಸಿದ ದುರುಳರು

09:47 AM Jun 02, 2024 | Team Udayavani |

ಚಿಕ್ಕೋಡಿ: ಕೌಟುಂಬಿಕ ಕಲಹದ ಹಿನ್ನೆಲೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದ ಘಟನೆಯಲ್ಲಿ ವ್ಯಕ್ತಿಯೋರ್ವನ ಕಿವಿ ಕತ್ತರಿಸಿದ ಘಟನೆ ಚಿಕ್ಕೋಡಿ ತಾಲೂಕಿನ ಜನವಾಡ ಗ್ರಾಮದಲ್ಲಿ ನಡೆದಿದೆ.

Advertisement

ಕೌಟುಂಬಿಕ ಕಲಹ ಹಿನ್ನೆಲೆ ಜನವಾಡ ಗ್ರಾಮದ ಸಿದ್ದು ಪೂಜಾರಿಗೆ ಆತನ ಪತ್ನಿಯ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಹಲ್ಲೆಯಲ್ಲಿ ಸಿದ್ದು ಪೂಜಾರಿ ಕಿವಿ ತುಂಡಾಗಿತ್ತು. ಜತೆಗೆ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿತ್ತು. ಗಾಯಗೊಂಡ ತಂದೆಯನ್ನು ಕೂಡಲೇ ಬೈಕ್ ಮೇಲೆ ಕೂರಿಸಿಕೊಂಡ ಮಗ ಮಾಳು ಪೂಜಾರಿ ಸದಲಗಾ ಸರ್ಕಾರಿ ಕರೆದುಕೊಂಡು ಹೋಗಿದ್ದು, ಈ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ.

ಆಂಬ್ಯುಲೆನ್ಸ್‌ ಕೊಡಿ ಎಂದಿದ್ದಕ್ಕೆ ಆಸ್ಪತ್ರೆ ವೈದ್ಯರು ಚಾಲಕ ಇಲ್ಲ. ನೀವೇ ಆಂಬ್ಯುಲೆನ್ಸ್‌ ತೆಗೆದುಕೊಂಡು ಹೋಗಿ ಎಂದಿದ್ದಾರೆ. ಹೀಗಾಗಿ ಮಾಳು ಪೂಜಾರಿ ಗಾಯಾಳು ತಂದೆಯನ್ನು ಸರ್ಕಾರಿ ಆಂಬ್ಯುಲೆನ್ಸ್‌ ವಾಹನವನ್ನು ತಾನೇ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ನಡೆದಿದೆ.

ಸದಲಗಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next