Advertisement

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

06:35 PM May 03, 2024 | Team Udayavani |

ಚಿಕ್ಕೋಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳು ಹಾಗೂ ಚಿಕ್ಕೋಡಿ ಕ್ಷೇತ್ರದಲ್ಲಿ ಸಂಸದರು ಮಾಡಿರುವ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ,ರಾಯಬಾಗ ಮತಕ್ಷೇತ್ರದ ಮುಖಂಡ, ಮಾಜಿ ವಿಧಾನ ಪರಿಷತ್ ಮಾಜಿ ಸದಸ್ಯ, ಕೆಎಂಎಫ್ ಮಾಜಿ ಅಧ್ಯಕ್ಷ ವಿವೇಕರಾವ್ ಪಾಟೀಲ ಶುಕ್ರವಾರ ಬಿಜೆಪಿ ಸೇರ್ಪಡೆಯಾದರು.

Advertisement

ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಸಮ್ಮುಖದಲ್ಲಿ ಹಾಲುಮತ ಸಮಾಜದ ಮುಖಂಡರಾದ ವಿವೇಕರಾವ ಪಾಟೀಲ ಮತ್ತು ಅವರ ಸಾವಿರಾರು ಹಾಲುಮತದ ಸಮಾಜದ ಬೆಂಬಲಿಗರು ಬಿಜೆಪಿ ಸೇರ್ಪಡೆಯಾದರು.ವಿವೇಕರಾವ ಪಾಟೀಲ ಅವರ ಬಿಜೆಪಿ ಸೇರ್ಪಡೆಯಿಂದ ಮತ್ತಷ್ಟು ಬಿಜೆಪಿಗೆ ಬಲ ಬಂದಂತಾಗಿದೆ.

ಬಿಜೆಪಿ ಅಭ್ಯರ್ಥಿ, ಸಂಸದ ಅಣ್ಣಾಸಾಹೇಬ ಜೊಲ್ಲೆ,ಈರಣ್ಣ ಕಡಾಡಿ, ರಮೇಶ ಕತ್ತಿ, ನಿಖಿಲ್ ಕತ್ತಿ, ದುರ್ಯೋಧನ ಐಹೊಳೆ, ಮಹಾಂತೇಶ ಕವಟಗಿಮಠ, ಪಿ.ಎಚ್.ಪೂಜಾರ, ಬಸವರಾಜ ಹುಂದ್ರಿ, ಮಾರುತಿ ಅಷ್ಟಗಿ,ಪಕ್ಷದ ಪ್ರಮುಖರು ನಾಯಕರು, ಪದಾಧಿಕಾರಿಗಳು,ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next