Advertisement

Chikmagalur: ಮರಣೋತ್ತರ ಪರೀಕ್ಷೆಗೆ ವೈದ್ಯರಿಲ್ಲದೆ ಕುಟುಂಬಸ್ಥರ ಪರದಾಟ

05:35 PM Jan 01, 2024 | Team Udayavani |

ಚಿಕ್ಕಮಗಳೂರು: ಶವಪರೀಕ್ಷೆಗೆ ವೈದ್ಯರಿಲ್ಲದ ಕಾರಣ ಮೃತರ ಕುಟುಂಬಸ್ಥರು ಪರದಾಡುತ್ತಿರುವ ಘಟನೆ ಜಿಲ್ಲೆ ಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಮೂರು ಮೃತದೇಹಗಳ ಮರಣೋತ್ತರ ಪರೀಕ್ಷೆ ಮಾಡಿಸಲು ಕುಟುಂಬಸ್ಥರು ಪರದಾಡುತ್ತಿದ್ದಾರೆ.

Advertisement

ಭಾನುವಾರ ರಾತ್ರಿ ಓರ್ವ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದು, ಮತ್ತಿಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ತಂದಿದ್ದು, ವೈದ್ಯರ ಕೊರತೆಯಿಂದ ಮರಣೋತ್ತರ ಪರೀಕ್ಷೆ ಮಾಡಿಸಲು ಸಾಧ್ಯವಾಗದೆ. ಮೃತದೇಹಗಳನ್ನು ಅಂಬ್ಯುಲೆನ್ಸ್ ಗಳಲ್ಲಿ ಇಟ್ಟು ಕಾಯುವಂತಾಗಿದೆ.

ವೈದ್ಯರಿಲ್ಲದೆ ಸಕಾಲದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ವೈದ್ಯರ ಕೊರತೆ ಇದ್ದರು ಸರ್ಕಾ ರ ವೈದ್ಯರನ್ನು ನೇಮಿಸದೆ. ನಿರ್ಲಕ್ಷ್ಯವಹಿಸಿದ ಪರಿಣಾಮ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next