Advertisement

ಚಿಕ್ಕಮಗಳೂರು: ಎಚ್‌ಡಿಡಿ ಪ್ರಚಾರ

11:10 PM May 05, 2023 | Team Udayavani |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂರೂ ಪಕ್ಷಗಳಿಂದ ಚುನಾವಣ ಪ್ರಚಾರ ಜೋರಾಗಿದೆ. ಶುಕ್ರವಾರ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಶೃಂಗೇರಿ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಸುಧಾಕರ್‌ ಶೆಟ್ಟಿ ಪರ ಪ್ರಚಾರ ನಡೆಸಿದರು. ಶುಕ್ರವಾರ ಬೆಳಗ್ಗೆ ಶೃಂಗೇರಿಗೆ ಆಗಮಿಸಿದ ದೇವೇಗೌಡರು ಶೃಂಗೇರಿ ಪಟ್ಟಣದ ಗೌರಿಶಂಕರ ಸಮುದಾಯ ಭವನದಲ್ಲಿ ಜೆಡಿಎಸ್‌ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

Advertisement

ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಮತಯಾಚನೆ ನಡೆಸುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಎಚ್‌.ಡಿ.ದೇವೇಗೌಡ ಅವರು, ಯಾವ ಸಂದರ್ಭದಲ್ಲಿ ಏನು ಹೇಳಿದ್ದಾರೆ ಹಾಗೂ ಯಾವ ಕಾರಣಕ್ಕೆ ಮಾತನಾಡಿದ್ದಾರೆ ಎಂಬುದನ್ನು ನನ್ನ ಹೃದಯದಲ್ಲಿ ಅರ್ಥ ಮಾಡಿಕೊಂಡಿದ್ದೇನೆ. ಅದನ್ನು ಸಾಬೀತು ಮಾಡಬೇಕು. ಕಡೂರಿನಲ್ಲಿ ವೈಎಸ್‌ವಿ ದತ್ತನನ್ನು ಗೆಲ್ಲಿಸಬೇಕು. ಆ ಕೆಲಸವನ್ನು ನೀವು ಮಾಡಿ ತೋರಿಸಬೇಕು. ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿದೆ ಎಂದು ಹೇಳಿದರು.

ಈ ವೇಳೆ ಭೋಜೇಗೌಡರು ನಾಲ್ಕು ಬಾರಿ ದೇವೇಗೌಡರ ಕಾಲು ಮುಟ್ಟಿ ನಮಸ್ಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next