Advertisement

ಚಿಕ್ಕಮಗಳೂರು: 5 ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ ಘೋಷಣೆ

11:16 PM Jul 23, 2023 | Team Udayavani |

ಚಿಕ್ಕಮಗಳೂರು: ಕಾಫಿನಾಡಲ್ಲಿ ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಜಿಲ್ಲೆಯಾದ್ಯಂತ ಭಾರೀ ಮಳೆಯ ಮುನ್ಸೂಚನೆ ನೀಡಿದ ಕಾರಣ ಭಾನುವಾರ ತಡ ರಾತ್ರಿ 5 ತಾಲೂಕಿನ ಶಾಲೆಗಳಿಗೆ (ಅಂಗನವಾಡಿಯಿಂದ ಪ್ರೌಢ ಶಾಲೆಗಳವರೆಗೆ) ಸೋಮವಾರ ಜುಲೈ 24 ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

Advertisement

ಜಿಲ್ಲೆಯ ಐದು ತಾಲೂಕುಗಳಾದ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ, ಕಳಸ, ಚಿಕ್ಕಮಗಳೂರು ತಾಲೂಕಿನ ಐದು ಹೋಬಳಿಗಳ (ಕಸಬಾ, ಆಂಬಳೆ , ಲಕ್ಯಾ ಹೊರತುಪಡಿಸಿ) ಶಾಲೆಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ಘೋಷಣೆ ಮಾಡಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ‌ ಘೋಷಣೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next