Advertisement
ನಗರದ ವಿಜಯಪುರದಲ್ಲಿರುವ ಕಸ್ತೂರ ಬಾ ಸದನದಲ್ಲಿನ ವೃತ್ತಿನಿರತ ಮಹಿಳೆಯರ ವಸತಿ ನಿಲಯದಲ್ಲಿ ಕಾನೂನು ಸೇವೆಗಳ ಪ್ರಾಧಿ ಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಸ್ತೂರ ಬಾ ಸದನದ ಸಂಯುಕ್ತಾಶ್ರದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Related Articles
Advertisement
ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ, ಕಿರುಕುಳ ಹಾಗೂ ಅತ್ಯಾಚಾರದಂತಹ ಪ್ರಕರಣಗಳು ಕಂಡುಬರುತ್ತಿದ್ದು ದೌರ್ಜನ್ಯ ತಡೆಯಲು ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾನೂನು ಸೇವಾ ಪ್ರಾ ಧಿಕಾರಗಳಿದ್ದು, ಅವುಗಳ ಉಪಯೋಗ ಪಡೆದುಕೊಳ್ಳುಬೇಕು. ಮಹಿಳೆಯರು ಹಕ್ಕು ಸಂರಕ್ಷಣೆಗಾಗಿ ಕಾನೂನು ರೂಪಿಸಲಾಗಿದ್ದು, ನೊಂದ ಮಹಿಳೆಯರು ಸೂಕ್ತ ನ್ಯಾಯ ಪಡೆದುಕೊಳ್ಳವಂತೆ ತಿಳಿಸಿದರು.
ಕಸ್ತೂರ ಬಾ ಸದನದ ಅಧ್ಯಕ್ಷೆ ಯಮುನ ಚೆನ್ನಬಸಪ್ಪ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಸೇನೆ, ಬಾಹ್ಯಾಕಾಶ, ರಾಜಕೀಯ ಸೇರಿದಂತೆ ಪ್ರತಿಯೊಂದು ರಂಗದಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ಪ್ರಾಮಾಣಿಕ ಹಾಗೂ ಶಕ್ತಿಯುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಹಿಳೆ ಯರು ಮತ್ತಷ್ಟು ಸಬಲರಾಗಿ ಉನ್ನತ ಸ್ಥಾನ ಗಳಿಸಬೇಕು. ಜೊತೆಗೆ ಸ್ವತಂತ್ರವಾಗಿ ಆಲೋಚಿಸುವ, ಸ್ವಾವಲಂಬಿಯಾಗಿ ಬದುಕುವ ಗುಣಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಬದುಕಬೇಕೆಂದರು.
ಕಾರ್ಯಕ್ರಮದಲ್ಲಿ ಯುವಸಬಲೀಕರಣ ಮತ್ತು ಕ್ರೀಡೆ ಇಲಾಖೆ ಸಹಾಯಕ ನಿರ್ದೇಶಕಿ ಡಾ| ಎಚ್.ಪಿ.ಮಂಜುಳಾ ಮಹಿಳಾ ಸಬಲೀಕರಣ ಕುರಿತು ವಿಶೇಷ ಉಪನ್ಯಾಸ ನೀಡಿದರು. ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಹೇಮಾ, ಕಸ್ತೂರ ಬಾ ಸದನದ ಉಪಾಧ್ಯಕ್ಷೆ ಯಶೋಧ ಲಕ್ಷ್ಮಣ್ ಗೌಡ, ಕಾರ್ಯದರ್ಶಿ ಮೋಹಿನಿ ಸಿದ್ದೇಗೌಡ ಇತರರು ಉಪಸ್ಥಿತರಿದ್ದರು.