Advertisement

ಚಿಕ್ಕಮಗಳೂರು:  ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

12:01 PM Jan 24, 2022 | Team Udayavani |

ಚಿಕ್ಕಮಗಳೂರು:  ಗ್ರಾಮಸ್ಥರ ನಿದ್ದೆಗೆಡಿಸಿದ್ದ ಎಂಟು ವರ್ಷದ ಗಂಡು ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದೆ.

Advertisement

ಕಡೂರು ತಾಲೂಕಿನ ವೈ.ಮಲ್ಲಾಪುರ ಗ್ರಾಮದಲ್ಲಿ ಕೆಲ ತಿಂಗಳಿಂದ ವೈ ಮಲ್ಲಾಪುರ ಗ್ರಾಮದ ಸುತ್ತಮುತ್ತ ಈ ಚಿರತೆ ಸಂಚರಿಸುತ್ತಿದ್ದಂರಿಂದ ಗ್ರಾಮದ ಜನರು ಭಯದಿಂದ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಗ್ರಾಮದ ಕೆರೆಯ ಸಮೀಪ ಬೋನ್ ಗೆ ನಾಯಿ ಬಿಟ್ಟು, ಚಿರತೆಯನ್ನು ಸೆರೆಹಿಡಿಯಲಾಗಿದೆ.

ಸೆರೆಹಿಡಿದ ಚಿರತೆಯನ್ನು ಅರಣ್ಯ ಸಿಬ್ಬಂದಿಗಳು ಭದ್ರಾ ಅಭಯಾರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next