Advertisement

Chikmagalur ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಬಿಜೆಪಿಯಿಂದ ಅಮಾನತು

01:29 PM Oct 20, 2023 | Team Udayavani |

ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಚ್ ಸಿ ಕಲ್ಮುರುಡಪ್ಪ ತಿಳಿಸಿದರು.

Advertisement

ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಪಕ್ಷದ ಆದೇಶ‌ ಶಿಸ್ತು ಪಾಲಿಸದೆ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಅಮಾನತು ಮಾಡಿ ಆದೇಶಿಸಲಾಗಿದೆ ಎಂದು ತಿಳಿದರು.

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎರಡು ಬಾರೀ ರಾಜೀನಾಮೆ ನೀಡಿ ಪಕ್ಷದ ಸೂಚನೆ ಮೀರಿ ರಾಜೀನಾಮೆ ಹಿಂಪಡೆದು ನಾಪತ್ತೆಯಾಗಿ ಪಕ್ಷದ ಸಂಪರ್ಕಕ್ಕೆ ಸಿಗದ ಕಾರಣಕ್ಕೆ ಅಮಾನತು ಮಾಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next