Advertisement

ಮಲೆನಾಡಲ್ಲಿ ಧಾರಾಕಾರ ಮಳೆ

06:56 PM May 23, 2020 | Naveen |

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುರುವಾದ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ನಗರದಲ್ಲಿ ಸುಮಾರು ಅರ್ಧಗಂಟೆಗಳ ಕಾಲ ಬಾರೀ ಮಳೆಯಾಗಿದ್ದು ನಗರದಲ್ಲಿ ಕೆಲಹೊತ್ತು ಜನಜೀವನ ಅಸ್ತವ್ಯಸ್ತವಾಗಿತ್ತು.

Advertisement

ಕಳೆದ ಕೆಲವು ದಿನಗಳಿಂದ ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಗುರುವಾರ ಚಿಕ್ಕಮಗಳೂರು ತಾಲೂಕು ಸೇರಿದಂತೆ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಧಾರಾಕಾರ ಮಳೆಯಾದ ಬಗ್ಗೆ ವರದಿಯಾಗಿದೆ. ಚಿಕ್ಕಮಗಳೂರು ನಗರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ರಸ್ತೆಗಳ ಮೇಲೆಯೇ ಮಳೆ ನೀರು ಹರಿಯುವಂತಾಗಿತ್ತು. ರಸ್ತೆ ಬದಿಯ ಚರಂಡಿಗಳಲ್ಲಿ ಮಳೆ ನೀರು ತುಂಬಿ ಹರಿಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಚಿಕ್ಕಮಗಳೂರು ನಗರ ಸೇರಿದಂತೆ ತಾಲೂಕಿನ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ, ಆಲ್ದೂರು, ಆಣೂರು, ವಸ್ತಾರೆ, ಮೂಗ್ತಿಹಳ್ಳಿ, ಮಲ್ಲಂದೂರು ಮತ್ತಿತರ ಪ್ರದೇಶಗಳಲ್ಲಿ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಅಲ್ಲಲ್ಲಿ ಮಳೆಯಾಗಿದ್ದು, ಎನ್‌.ಆರ್‌. ಪುರ ತಾಲೂಕಿನ ಬಾಳೆಹೊನ್ನೂರು, ಮಾಗುಂಡಿ ಸುತ್ತಮುತ್ತ ಮಳೆಯಾಗಿದೆ. ಕೊಪ್ಪ, ಶೃಂಗೇರಿ ತಾಲೂಕುಗಳಲ್ಲಿ ಮಳೆಯಾಗಿದೆ. ತರೀಕೆರೆ, ಕಡೂರು ತಾಲೂಕುಗಳ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next