Advertisement

ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು

01:02 PM Feb 10, 2023 | Team Udayavani |

ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಹಬ್ಬಿದ್ದು, ಅರಣ್ಯ ಪ್ರದೇಶ ಧಗಧಗಿಸಿ ಉರಿತ್ತಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಸಮೀಪದ ಚುರ್ಚೆಗುಡ್ಡ ಎಂಬಲ್ಲಿ ಫೆ. 10ರ ಬೆಳ್ಳಿಗ್ಗೆ ಸಂಭವಿಸಿದೆ.

Advertisement

ಚುರ್ಚೆಗುಡ್ಡ ಮೀಸಲು ಅರಣ್ಯ ಪ್ರದೇಶದಲ್ಲಿ ಇಡೀ ರಾತ್ರಿ ಕಾಡ್ಗಿಚ್ಚು ಹಬ್ಬಿದ್ದು, ನೂರಾರು ಎಕರೆ ಅರಣ್ಯ ಸಂಪತ್ತು ಭಸ್ಮವಾಗಿದೆ ಎಂದು ತಿಳಿದು ಬಂದಿದೆ.

ಬೆಂಕಿಯಲ್ಲಿ ಹಲವಾರು ಪ್ರಾಣಿ-ಪಕ್ಷಿಗಳು ಬೆಂದು ಕರಕಲಾಗಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳ ಹರಸಾಹಸ ಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next