Advertisement

ತರಕಾರಿ ಬೀಜ ಮಾರಾಟಕ್ಕೆ ಲೈಸೆನ್ಸ್‌ ಕಡ್ಡಾಯ

05:27 PM May 25, 2020 | Naveen |

ಚಿಕ್ಕಮಗಳೂರು: ತರೀಕೆರೆ ಹಾಗೂ ಅಜ್ಜಂಪುರ ತಾಲೂಕು ವ್ಯಾಪ್ತಿಯಲ್ಲಿನ ತರಕಾರಿ ಬೀಜ ಮಾರಾಟಗಾರರು ತೋಟಗಾರಿಕೆ ಇಲಾಖೆ ವತಿಯಿಂದ ಪರವಾನಗಿ (ಲೈಸೆಸ್ಸ್) ಪಡೆಯುವುದು ಕಡ್ಡಾಯವಾಗಿದೆ.

Advertisement

ಸಕಾಲ ಸೇವಾ ಸಿಂಧು ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಿ ಪರವಾನಗಿ ಪಡೆಯಬಹುದಾಗಿದ್ದು, ಪರವಾನಿಗೆ ಇಲ್ಲದೇ ತರಕಾರಿ ಬೀಜಗಳನ್ನು ಹಾಗೂ ಬಿಡಿ ಬೀಜ ಮಾರಾಟ ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದ್ದು, ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ತರೀಕೆರೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next