Advertisement

ಮಗುವಿನ ಅಪಹರಣ: ಮಾನಕ್ಕೆ ಅಂಜಿ ಆತ್ಮಹತ್ಯೆಗೆ ಯತ್ನಿಸಿದವರ ಪೈಕಿ ನಾಲ್ವರು ಸಾವು

06:31 PM Nov 08, 2021 | Team Udayavani |

ಕೋಲಾರ: ಮಗುವಿನ ಅಪಹರಣ ಆರೋಪ ಹೊತ್ತ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣ ನಗರದಲ್ಲಿ ಭಾನುವಾರ ನಡೆದಿದ್ದು, ಸೋಮವಾರ ಐವರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ.

Advertisement

ನಗರದ ಕಾರಂಜಿಕಟ್ಟೆ ಬಡಾವಣೆಯಲ್ಲಿ ವಿಷ ಸೇವಿಸಿ ನರಳಾಡುತ್ತಿದ್ದ ಐವರನ್ನು ನೆರೆ ಹೊರೆಯವರು ಆಸ್ಪತ್ರೆಗೆ ಸೇರಿಸಿದ್ದರು. ಸೋಮವಾರ ನಾಲ್ವರು ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಮೃತರನ್ನು ಮುನಿಯಪ್ಪ(70),ಬಾಬು (45) ಹಾಗೂ ಗಂಗೋತ್ರಿ(17) ನಾರಾಯಣಮ್ಮ (65)  ಎಂದು ಗುರುತಿಸಲಾಗಿದೆ.

ಇನ್ನುಳಿದ ಪುಷ್ಪ(33) ಪರಿಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯ ತ್ರೀವ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಭಾನುವಾರ ಸಂಜೆ ಒಂದೇ ಕುಟುಂಬದ ಎಲ್ಲರೂ ಒಟ್ಟಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಪುಷ್ಪ ಎಂಬ ಮಹಿಳೆ ಗಂಡು ಮಗುವೊಂದನ್ನ ಬೇರೊಬ್ಬರಿಗೆ ಮಾರಾಟ ಮಾಡಿರುವ ಆರೋಪ ಹೊತ್ತಿದ್ದೇ ಈ ಘಟನೆಗೆ ಕಾರಣವಾಗಿತ್ತು.

Advertisement

ಈ ವಿಚಾರವಾಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ವಿಚಾರಣೆಯೂ ನಡೆದಿತ್ತು. ಕೇಸ್ ದಾಖಲಾಗಿದಕ್ಕೆ ಮಾನಕ್ಕೆ ಅಂಜಿ ಎಲ್ಲರೂ ಆತ್ಮಹತ್ಯೆಗೆ ಯತ್ನಿಸಿದ್ದರು.

ಮೃತರ ಸಾವಿನ ಕುರಿತಂತೆ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next