Advertisement

ಬೆಳ್ತಂಗಡಿ: ಮಕ್ಕಳ ಅಪಹರಣ ಶಂಕೆ; ಪೋಷಕರಲ್ಲಿ ಆತಂಕ

12:18 AM Nov 09, 2022 | Team Udayavani |

ಬೆಳ್ತಂಗಡಿ: ಬಂಗಾಡಿ ಸರಕಾರಿ ಪ್ರೌಢಶಾಲೆಯ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷರಾಗಿದ್ದಾರೆ.

Advertisement

ಪೋಷಕರೇ ಜಾಗೃತರಾಗಿ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದರಿಂದ ಮಕ್ಕಳ ಅಪಹರಣ ಎಂಬ ಶಂಕೆ ವ್ಯಕ್ತವಾಗಿ ಪೋಷಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ಕಳೆದೊಂದು ದಿನದಿಂದ ನಡೆದಿದೆ.

ಬಂಗಾಡಿ ಪ್ರೌಢ ಶಾಲಾ ಬಳಿ ಸೋಮವಾರ ಸಂಜೆ ಯಾರೋ ಅಪರಿಚಿತ ವ್ಯಕ್ತಿಗಳು ಕಾರೊಂದನ್ನು ನಿಲ್ಲಿಸಿ ಅಲ್ಲಿಯ ಶಾಲಾ ವಿದ್ಯಾರ್ಥಿಯನ್ನು ಬೆದರಿಸಿದ್ದರು ಎನ್ನಲಾಗಿದೆ. ಹೆದರಿದ ವಿದ್ಯಾರ್ಥಿಗಳು ಪೋಷಕರ ಗಮನಕ್ಕೆ ತಂದಿದ್ದಾರೆ. ಈ ಕುರಿತು ಪೊಲೀಸ್‌ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ಬೆಳ್ತಂಗಡಿಯ ಬಿಇಒವಿರೂಪಾಕ್ಷಪ್ಪ ಎಚ್‌.ಎಸ್‌. ತಿಳಿಸಿದ್ದಾರೆ.

ಈ ಬಗ್ಗೆ ಸಂಬಂಧಪಟ್ಟ ಪೊಲೀಸ್‌ ಠಾಣೆಯಲ್ಲಿ ವಿಚಾರಿಸಿದಾಗ ಈ ಬಗ್ಗೆ ಶಾಲೆಯಿಂದ ಮಾಹಿತಿ ಪಡೆಯಲಾಗಿದ್ದು ಪರಿಶೀಲನೆ ನಡೆಸುತ್ತಿರುವುದಾಗಿ ಬೆಳ್ತಂಗಡಿ ವೃತ್ತನಿರೀಕ್ಷಕರಾದ ಶಿವಕುಮಾರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next