Advertisement

ರಾಯಚೂರು: ಕೂಲಿ-ಕೆಲಸಕ್ಕೆ ತೆರಳುತ್ತಿದ್ದ 27 ಬಾಲಕಾರ್ಮಿಕರ ರಕ್ಷಣೆ

04:01 PM Sep 04, 2020 | keerthan |

ರಾಯಚೂರು: ಸಿರವಾರ ಪಟ್ಟಣದ ಮಾರ್ಗವಾಗಿ ವಿವಿಧೆಡೆ ಕೂಲಿ-ಕೆಲಸಕ್ಕೆ ತೆರಳುತ್ತಿದ್ದ ಗೂಡ್ಸ್ ವಾಹನಗಳ ಮೇಲೆ ಶುಕ್ರವಾರ ಅಧಿಕಾರಿಗಳು ದಾಳಿ ನಡೆಸಿ 27ಕ್ಕೂ ಹೆಚ್ಚು ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ.

Advertisement

ಬಾಲ ಕಾರ್ಮಿಕ ಯೋಜನೆ, ಜಿಲ್ಲಾ ಮಕ್ಕಳ ರಕ್ಷ ಣಾ ಘಟಕ, ತಾಲೂಕು ಆಡಳಿತ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ದಾಳಿ ನಡೆಸಿಲಾಯಿತು.

ಬಲ್ಲಟಗಿ, ಲಕ್ಕಂದಿನ್ನಿ, ಸಿರವಾರ, ನಾರಬಂಡ ಸೇರಿದಂತೆ ವಿವಿಧೆಡೆಯಿಂದ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವಾಹನಗಳ ಮೇಲೆ ದಾಳಿ ನಡೆಸಿದ್ದು ಒಟ್ಟು 9 ವಾಹನಗಳನ್ನು ವಶಪಡಿಸಿಕೊಂಡಿದ್ದು 27 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಅವರನ್ನು ಮತ್ತೊಮ್ಮೆ ಕೂಲಿ ಕೆಲಸಕ್ಕೆ ಕಳುಹಿಸದಂತೆ ಎಚ್ಚರಿಸಿ ಪಾಲಕರೊಂದಿಗೆ ವಾಪಸ್ಸು ಕಳುಹಿಸಲಾಗಿದೆ ಎಂದು ಬಾಲ ಕಾರ್ಮಿಕ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next