Advertisement

ಭಾಲ್ಕಿ: ಅಧಿಕಾರಿಗಳಿಂದ ಬಾಲ್ಯ ವಿವಾಹ ತಡೆ

02:12 PM Jan 09, 2021 | Team Udayavani |

ಭಾಲ್ಕಿ: ತಾಲೂಕಿನ ಜಿರಗ್ಯಾಳ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಸೂಕ್ತ ಮಾಹಿತಿಯ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ತಡೆಹಿಡಿದ ಘಟನೆ ನಡೆದಿದೆ.

Advertisement

ಮೆಹಕರ ಪೊಲೀಸ್‌ ಠಾಣೆ ವ್ಯಾಪ್ತಿಯ ಜೀರಗ್ಯಾಳ ಗ್ರಾಮದ 12 ವರ್ಷದ ಬಾಲಕಿಯನ್ನು ಅದೇ ಗ್ರಾಮದ 24 ವರ್ಷದ ವ್ಯಕ್ತಿಗೆ ಕೊಟ್ಟು ಮದುವೆ ಮಾಡಲು ನಿಶ್ಚಯಿಸಲಾಗಿತ್ತು. ಈ ಕುರಿತು ಮಾಹಿತಿ ತಿಳಿದ ಮೆಹಕರ ಪೊಲೀಸ್‌ ಠಾಣೆ ಆರಕ್ಷಕ ಉಪನಿರೀಕ್ಷಕ ನಂದಕುಮಾರ ವಿವಾಹ ತಡೆಗೆ ತಂಡ ರಚಿಸಿ, ದಾಳಿ ನಡೆಸಿದರು.

ಮಕ್ಕಳ ರಕ್ಷಣಾಧಿಕಾರಿ ಪ್ರಶಾಂತ ಬಿರಾದಾರ ಬಾಲ್ಯ ವಿವಾಹ ನಿಷೇಧ ಕಾಯಿದೆ ಮತ್ತು ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಹೇಳಿದರು. ಮಗಳಿಗೆ 18 ವರ್ಷ ತುಂಬುವವರೆಗೆ ವಿವಾಹ ಮಾಡುವುದಿಲ್ಲ ಎನ್ನುವ ಮುಚ್ಚಳಿಕೆ ಪತ್ರ
ಬರೆಸಿಕೊಂಡು ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದರು.

ಇದನ್ನೂ ಓದಿ:ಬೆಳಗಾವಿ, ಬಸವಕಲ್ಯಾಣ ಉಪಚುನಾವಣೆ: ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕಾಂಗ್ರೆಸ್

ಈ ಸಂದರ್ಭದಲ್ಲಿ ಗ್ರಾ.ಪಂ ಅಧಿಕಾರಿ ಚಂದ್ರಶೇಖರ ಬನ್ನಾಳೆ, ಎಎಸ್‌ಐ ಮಲ್ಲಿಕಾರ್ಜುನ, ಸಿಡಿಪಿಒ ಕಚೇರಿಯ ಮೇಲ್ವಿಚಾರಕಿ ವಿಜಯಲಕ್ಷ್ಮಿ, ಮುಖ್ಯಶಿಕ್ಷಕ ಮಾರುತಿರಾವ, ಭಾತಂಬ್ರಾ ಗ್ರಾಪಂ ಪಿಡಿಒ ಧನರಾಜ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next